<p><strong>ಅಂಜನಾದ್ರಿ (ಕೊಪ್ಪಳ): </strong>ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಬೆಟ್ಟದ ಸುತ್ತಮುತ್ತಲಿನ ವಾತಾವರಣ ಸಂಪೂರ್ಣ ಕೇಸರಿಮಯವಾಗಿದ್ದು, ಇಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.</p>.<p><br />ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರುಭಾನುವಾರವೇ ಬಂದಿದ್ದಾರೆ. ಒಂದೂವರೆ ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರಿಗೆ ಜಿಲ್ಲಾಡಳಿತ ಉಪಾಹಾರ, ಊಟದ ವ್ಯವಸ್ಥೆ ಮಾಡಿದೆ. ಗಂಗಾವತಿ, ಕೊಪ್ಪಳ, ಹೊಸಪೇಟೆ, ಬಳ್ಳಾರಿ ಕಡೆಯಿಂದ ಬರುವವರಿಗೆ ಅಲ್ಲಲ್ಲಿ ಊಟ, ನೀರಿನ ಸೌಲಭ್ಯ ಕಲ್ಪಿಸಲಾಗಿದೆ.</p>.<p>ಹನುಮವ್ರತ ಆಚರಿಸಿದ ಮಾಲಾಧಾರಿಗಳು ಪಾದಯಾತ್ರೆ ಮೂಲಕ ಅಂಜನಾದ್ರಿ ಪರ್ವತದತ್ತ, ಜೈ ಶ್ರೀರಾಮ ಎನ್ನುವ ಘೋಷಣೆಯೊಂದಿಗೆ ಭಗವಾದ್ವಜ ಹಿಡಿದು ಕೇಸರಿ ಧಿರಿಸಿನೊಂದಿಗೆ ಬೆಟ್ಟದತ್ತ ಸಾಲುಸಾಲಾಗಿ ಸಾಗಿದರು. ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಬಂದ ಭಕ್ತರು ಬಯಲು ಗದ್ದೆಗಳಲ್ಲಿ ವಾಸ್ತವ್ಯ ಹೂಡಿದ್ದು ಕಂಡುಬಂತು.</p>.<p>ಪಾದಯಾತ್ರೆಯ ಮೂಲಕ ಬಂದ ಬಹುತೇಕ ಮಾಲಾಧಾರಿಗಳು ಮಾರ್ಗ ಮಧ್ಯದಲ್ಲಿರುವ ಹನುಮ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಜನಾದ್ರಿ (ಕೊಪ್ಪಳ): </strong>ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಬೆಟ್ಟದ ಸುತ್ತಮುತ್ತಲಿನ ವಾತಾವರಣ ಸಂಪೂರ್ಣ ಕೇಸರಿಮಯವಾಗಿದ್ದು, ಇಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.</p>.<p><br />ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರುಭಾನುವಾರವೇ ಬಂದಿದ್ದಾರೆ. ಒಂದೂವರೆ ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರಿಗೆ ಜಿಲ್ಲಾಡಳಿತ ಉಪಾಹಾರ, ಊಟದ ವ್ಯವಸ್ಥೆ ಮಾಡಿದೆ. ಗಂಗಾವತಿ, ಕೊಪ್ಪಳ, ಹೊಸಪೇಟೆ, ಬಳ್ಳಾರಿ ಕಡೆಯಿಂದ ಬರುವವರಿಗೆ ಅಲ್ಲಲ್ಲಿ ಊಟ, ನೀರಿನ ಸೌಲಭ್ಯ ಕಲ್ಪಿಸಲಾಗಿದೆ.</p>.<p>ಹನುಮವ್ರತ ಆಚರಿಸಿದ ಮಾಲಾಧಾರಿಗಳು ಪಾದಯಾತ್ರೆ ಮೂಲಕ ಅಂಜನಾದ್ರಿ ಪರ್ವತದತ್ತ, ಜೈ ಶ್ರೀರಾಮ ಎನ್ನುವ ಘೋಷಣೆಯೊಂದಿಗೆ ಭಗವಾದ್ವಜ ಹಿಡಿದು ಕೇಸರಿ ಧಿರಿಸಿನೊಂದಿಗೆ ಬೆಟ್ಟದತ್ತ ಸಾಲುಸಾಲಾಗಿ ಸಾಗಿದರು. ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಬಂದ ಭಕ್ತರು ಬಯಲು ಗದ್ದೆಗಳಲ್ಲಿ ವಾಸ್ತವ್ಯ ಹೂಡಿದ್ದು ಕಂಡುಬಂತು.</p>.<p>ಪಾದಯಾತ್ರೆಯ ಮೂಲಕ ಬಂದ ಬಹುತೇಕ ಮಾಲಾಧಾರಿಗಳು ಮಾರ್ಗ ಮಧ್ಯದಲ್ಲಿರುವ ಹನುಮ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>