ಕಲ್ಲುಗಂಗೂರು ಸರ್ವೆ ನಂಬರ್ 2ರಲ್ಲಿ ಎಸ್.ಎಸ್. ಕ್ರಷರ್ ನಡೆಯುತ್ತಿತ್ತು. ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸ್ಥಳಕ್ಕೆ ತಂದು ಮರು ವಿತರಣೆ ಮಾಡುವಾಗ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಆರು ಜನ ಮೃತಪಟ್ಟಿದ್ದರು. ಪ್ರಕರಣದ ನಂತರ ಕ್ರಷರ್ ನಡೆಸುತ್ತಿದ್ದ ಸುಧಾಕರ್ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು. ಪರವಾನಗಿಯನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.