‘ಗೌರ (ಬಿ) ಗ್ರಾಮದ ವಾರ್ಡ್ ಸಂಖ್ಯೆ 1 ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದೆ. ಶ್ರೀದೇವಿ ಅವರು ಮಹಾರಾಷ್ಟ್ರದ ಸಲಗರ ಗ್ರಾಮದವರು. ಅಲ್ಲಿ ನೀಡಿರುವ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಲಗತ್ತಿಸಿ ಅವರು ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರ ತಿರಸ್ಕೃತವಾಗುವ ಆತಂಕದಿಂದ ಸ್ಥಳೀಯ ಜಾತಿ ಪ್ರಮಾಣಪತ್ರಕ್ಕಾಗಿ ವಾರದ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಅವರಿಗೆ ಪ್ರಮಾಣಪತ್ರ ನೀಡಲಾಗಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.