‘ನಾನು ಈಗಾಗಲೇ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದೇನೆ. ಅವರೂ ನಮ್ಮನ್ನು ಯಾವುದೇ ಕಾರ್ಯಕ್ರಮಕ್ಕೂ ಕರೆದಿಲ್ಲ. ನಿಖಿಲ್ ಕುಮಾರಸ್ವಾಮಿ ಪಕ್ಷ ಬಿಡಬೇಡಿ ಎಂದಿದ್ದರು. ನಮ್ಮ ಮನೆಗೆ ಬಂದು ಇಲ್ಲೇ ಇರಬೇಕೆಂದು ಹೇಳಿದರು. ಅವರಿಗೂ ಪಕ್ಷದಲ್ಲಿ ಆಗಿರುವ ಅಪಮಾನ, ನೋವು ಹೇಳಿದ್ದೇನೆ. ಎಲ್ಲಾ ಸಂದರ್ಭಗಳಲ್ಲೂ ನನ್ನನ್ನು ದೂರವಿಟ್ಟು ನಿರ್ಧಾರ ಕೈಗೊಂಡಿದ್ದಾರೆ. ಹೀಗಿರುವಾಗ ಹೇಗೆ ಪಕ್ಷದಲ್ಲಿ ಇರಲು ಸಾಧ್ಯ’ ಎಂದರು.