ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಲೇಖಕ ಪುರುಷೋತ್ತಮ ಬಿಳಿಮಲೆ ಅವರ ಬಗ್ಗೆ ತಮಗೆ ಹೆಮ್ಮೆ ಮತ್ತು ಗೌರವ ಇದೆ. ಪರ್ಯಾಯ ಸಾಹಿತ್ಯ ಸಮಾವೇಶವಿರಲಿ, ಇನ್ಯಾವುದೇ ಕಾರ್ಯಕ್ರಮವಿರಲಿ ಅದನ್ನು ಮಾಡಲು ಅವರಿಗೆ ಎಲ್ಲ ರೀತಿಯ ಹಕ್ಕಿದೆ. ಭಿನ್ನಾಭಿಪ್ರಾಯ ಹೊಂದಿದವರು ಸಹ ನಮ್ಮೊಂದಿಗೆ ಬರಬೇಕು. ಈ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಬೇಕು. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿರಲಿ, ಅವನ್ನು ವೇದಿಕೆಯಲ್ಲಿ ಬಗೆಹರಿಸಿಕೊಳ್ಳೋಣ ಎಂದು ನಾನು ಮನವಿ ಮಾಡುತ್ತೇನೆ ಎಂದರು.