ಕಾರ್ಯಕ್ರಮದ ನಿರೂಪಕರು ‘ಭಾವಿ ಶಾಸಕರಾದ ನಿಖಿಲ್ ಮಾತನಾಡಬೇಕು’ ಎಂದು ಹೇಳಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ನಿಖಿಲ್, ಕಾರ್ಯಕರ್ತರು ಈ ವಿಚಾರದಲ್ಲಿ ಗೊಂದಲ ಸೃಷ್ಠಿಸಬಾರದು ಎಂದು ಮನವಿ ಮಾಡಿದರು. ‘ತಾತ ದೇವೇಗೌಡರು, ತಂದೆ ಕುಮಾರಸ್ವಾಮಿ, ತಾಯಿ ಅನಿತಾರಿಗೆ ರಾಜಕೀಯ ನೆಲೆ ಕೊಟ್ಟ ಕ್ಷೇತ್ರವಿದು. ಹೀಗಾಗಿ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸುವುದು ನನ್ನ ಜವಾಬ್ದಾರಿ’ ಎಂದರು.