ಮತ್ತೊಂದೆಡೆ ಕೃಷಿ ಸಚಿವ ಬಿ.ಸಿ.ಪಾಟಲ ಅವರು ಇದೇ ವಿಷಯವಾಗಿ ಪ್ರತಿಕ್ರಿಯಿಸಿ, ‘ಸಿಎಂ ಬದಲಾವಣೆಯ ಊಹಾಪೋಹಗಳಿಂದ ಆಡಳಿತದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದ ಬೇಸರಗೊಂಡು ಯಡಿಯೂರಪ್ಪ ಅವರು ಆ ಹೇಳಿಕೆ ನೀಡಿದ್ದಾರೆ. ಆದರೆ ಪೂರ್ಣಾವಧಿಗೆ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಮತ್ತು ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.