ಡಿಕೆಶಿ ಪ್ರೇರಣೆ: ‘ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಸಿಕ್ಕಾಗ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಾರ್ವ ಜನಿಕವಾಗಿ ವಿಜಯೋತ್ಸವ ಮೆರವಣಿಗೆ ನಡೆಸಿರುವುದಕ್ಕೆ ಪ್ರೇರಣೆ ನೀಡಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದ ಡಿಕೆಶಿ ಅವರನ್ನು ಅವರ ಪಕ್ಷದ ಬೆಂಬಲಿಗರು ವಿಮಾನನಿಲ್ದಾಣದಿಂದ ಮೆರವಣಿಗೆಯಲ್ಲಿ ಕರೆ ತಂದಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಈ ರೀತಿ ಮಾಡಿದ್ದು ತಪ್ಪು. ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರು ಸ್ಪಷವಾಗಿ ಇದನ್ನು ಟೀಕೆ ಮಾಡಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್ ಮೆರವಣಿಗೆ ಮಾಡಿದ್ದಾಗ ಕಾಂಗ್ರೆಸ್ ನಾಯಕರು ಒಬ್ಬರಾದರೂ ಅದನ್ನು ತಪ್ಪು ಅಂತ ಹೇಳಿದ್ದರೇ’ ಎಂದು ಪ್ರಶ್ನಿಸಿದರು.