ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲವೆಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ

Last Updated 18 ಮಾರ್ಚ್ 2023, 11:43 IST
ಅಕ್ಷರ ಗಾತ್ರ

ತಿಪಟೂರು: ‘ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದಿಯೇ ಹೇಳಿದ್ದೆ. ಆ ಮಾತು ನಿಜ ಆಗಬಹುದು. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಗೊತ್ತಾಗಲಿದೆ’ ಎಂದು ಬಿಜೆಪಿ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅನಗತ್ಯವಾಗಿ ಓಡಾಡಿ, ಅಲ್ಲಿ, ಇಲ್ಲಿ ಎಂದು ಕಥೆ ಹೇಳುತ್ತಾರೆ. ಕೋಲಾರ, ಮತ್ತೊಂದು ಎಂದು ಹೇಳುವ ಅಗತ್ಯ ಇರಲಿಲ್ಲ. ಯಾಕೆ ಆ ರೀತಿ ಗೊಂದಲ ಮೂಡಿಸುತ್ತಾರೋ ಗೊತ್ತಿಲ್ಲ. ನನ್ನ ಪ್ರಕಾರ ವರುಣಾದಲ್ಲೇ ನಿಲ್ಲುತ್ತಾರೆ’ ಎಂದರು.

ಕಂದಾಯ ಸಚಿವ ಆರ್.ಅಶೋಕ, ‘ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಈಗಾಗಲೇ ಅಲ್ಲಿ ಉರಿಗೌಡ, ನಂಜೇಗೌಡ ವಿಚಾರ ಹೊತ್ತಿಕೊಂಡಿದೆ. ಕೋಲಾರದಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಅಲ್ಲಿ ಸೋಲುವ ಭಯದಿಂದ ಸ್ಪರ್ಧೆ ಮಾಡುತ್ತಿಲ್ಲ’ ಎಂದು ಹೇಳಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT