‘ಘರ್ ವಾಪಸಿ’ಗೆ ಸಲಹೆ: ಟ್ವಿಟರ್ನಲ್ಲೂ ಚರ್ಚೆ ಮುಂದುವರಿಸಿರುವ ಸಿದ್ದರಾಮಯ್ಯ, ‘ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ ‘ಘರ್ ವಾಪಸಿ’ ಆಗಿಬಿಡಿ’ ಎಂದು ಹೇಳಿದರು.