ಹುಬ್ಬಳ್ಳಿ: ‘ಪರಿಷತ್ನಲ್ಲಿ ನಿನ್ನೆ ಪ್ರತಿಪಕ್ಷಗಳು ನಡೆದುಕೊಂಡ ರೀತಿ ನನಗೆ ನೋವುಂಟು ಮಾಡಿತು. ಹಾಗಾಗಿ, ರಾಜೀನಾಮೆಗೆ ಮುಂದಾದೆ. ಕಡೆಗೆ, ಪ್ರತಿಪಕ್ಷಗಳ ನಾಯಕರು ನನ್ನನ್ನು ಭೇಟಿ ಮಾಡಿ, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೇಳಿದರು. ಹಾಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.