ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಟ್ವೀಟ್ ಮಾಡಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ,‘ ಎಂದು ಅವರು ಹೇಳಿದ್ದಾರೆ.