<p><strong>ಬೆಂಗಳೂರು:</strong> 'ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟಿದೆ. ಎಷ್ಟು ದಿನ ಹೈಕಮಾಂಡ್ ವಿಶ್ವಾಸ ಇಟ್ಟು ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಇರುತ್ತೇನೆ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಬೆಳಿಗ್ಗೆ ಮಾತನಾಡಿದ ಅವರು, 'ಯಾವಾಗ ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳುತ್ತಾರೊ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಇದರಲ್ಲು ಯಾವುದೇ ಗೊಂದಲದಲ್ಲಿ ನಾನು ಇಲ್ಲ' ಎಂದರು.</p>.<p>'ನನಗೆ ಅವಕಾಶ ಕೊಟ್ಟಿದ್ದಾರೆ. ಅದನ್ನು ಶಕ್ತಿಮೀರಿ ಬಳಸಿಕೊಳ್ಳುತ್ತೇನೆ. ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಉಳಿದದ್ದು ಹೈಕಮಾಂಡ್ಗೆ ಬಿಟ್ಟಿದ್ದು' ಎಂದೂ ಹೇಳಿದರು.</p>.<p>ನಾಯಕತ್ವ ಬದಲಾವಣೆಯ ಊಹಾಪೋಹದ ನಡುವೆ ಮುಖ್ಯಮಂತ್ರಿಯ ಈ ಹೇಳಿಕೆ ಕುತೂಹಲ ಮೂಡಿಸಿದೆ.</p>.<p>'ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಎಂದು ಏನಿಲ್ಲ. ಇದನ್ನು ನಾನು ಒಪ್ಪುವುದಿಲ್ಲ' ಎಂದರು.</p>.<p>'ಪರ್ಯಾಯ ನಾಯಕತ್ವ ಇಲ್ಲ ಎಂಬುದನ್ನ ನಾನು ಒಪ್ಪುವುದಿಲ್ಲ. ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇದ್ದಾರೆ. ಆಯಾಯ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟಿದೆ. ಎಷ್ಟು ದಿನ ಹೈಕಮಾಂಡ್ ವಿಶ್ವಾಸ ಇಟ್ಟು ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಇರುತ್ತೇನೆ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಬೆಳಿಗ್ಗೆ ಮಾತನಾಡಿದ ಅವರು, 'ಯಾವಾಗ ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳುತ್ತಾರೊ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಇದರಲ್ಲು ಯಾವುದೇ ಗೊಂದಲದಲ್ಲಿ ನಾನು ಇಲ್ಲ' ಎಂದರು.</p>.<p>'ನನಗೆ ಅವಕಾಶ ಕೊಟ್ಟಿದ್ದಾರೆ. ಅದನ್ನು ಶಕ್ತಿಮೀರಿ ಬಳಸಿಕೊಳ್ಳುತ್ತೇನೆ. ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಉಳಿದದ್ದು ಹೈಕಮಾಂಡ್ಗೆ ಬಿಟ್ಟಿದ್ದು' ಎಂದೂ ಹೇಳಿದರು.</p>.<p>ನಾಯಕತ್ವ ಬದಲಾವಣೆಯ ಊಹಾಪೋಹದ ನಡುವೆ ಮುಖ್ಯಮಂತ್ರಿಯ ಈ ಹೇಳಿಕೆ ಕುತೂಹಲ ಮೂಡಿಸಿದೆ.</p>.<p>'ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಎಂದು ಏನಿಲ್ಲ. ಇದನ್ನು ನಾನು ಒಪ್ಪುವುದಿಲ್ಲ' ಎಂದರು.</p>.<p>'ಪರ್ಯಾಯ ನಾಯಕತ್ವ ಇಲ್ಲ ಎಂಬುದನ್ನ ನಾನು ಒಪ್ಪುವುದಿಲ್ಲ. ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇದ್ದಾರೆ. ಆಯಾಯ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>