<p><strong>ನವದೆಹಲಿ: </strong>ಅಯೋಧ್ಯೆಯಲ್ಲಿನ ವಿವಾದಿತ ನಿವೇಶನದಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿವಾದಿತ ಭೂಮಿಯಲ್ಲಿ ನಿರ್ಮಿಸುವ ಮಂದಿರದ ಬದಲಿಗೆ ಬೇರೆ ಕಡೆ ಅಥವಾ ನಮ್ಮೂರಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವೆ' ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/high-level-probe-should-happen-on-yatnal-statement-says-siddaramaiah-805829.html"><strong>‘ಮಾರಿಷಿಯಸ್ನಲ್ಲಿ ಯಡಿಯೂರಪ್ಪ ಕುಟುಂಬದ ಅಕ್ರಮ ಹಣ’: ಯತ್ನಾಳ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ: ಸಿದ್ದರಾಮಯ್ಯ</strong></a></p>.<p>'ರಾಮ ಜನ್ಮ ಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದ್ದು, ದೇಣಿಗೆ ನೀಡುವುದರಲ್ಲಿ ತಪ್ಪೇನಿದೆ' ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಬೇರೆ ಯಾವುದೇ ಸ್ಥಳದಲ್ಲಿ ಮಂದಿರ ನಿರ್ಮಿಸಿದರೂ ಹಣ ನೀಡಬಹುದು. ಈಗ ಆರ್ಎಸ್ಎಸ್ನವರುಸಂಗ್ರಹಿಸುತ್ತಿರುವ ಹಣಕ್ಕೆ ರಸೀದಿ ಕೊಟ್ಟು, ಲೆಕ್ಕ ನೀಡುತ್ತಾರೇನು' ಎಂದು ಪ್ರಶ್ನಿಸಿದರು.</p>.<p>ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಕೆಲವರು ಗುರುತು ಇಟ್ಟುಕೊಂಡು ಬೆದರಿಕೆ ಒಡ್ಡಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರಂತೆ. ಅದಕ್ಕೆ ಪ್ರತಿಕ್ರಿಯೆ ನೀಡಲಾಗದು ಎಂದು ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಯೋಧ್ಯೆಯಲ್ಲಿನ ವಿವಾದಿತ ನಿವೇಶನದಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿವಾದಿತ ಭೂಮಿಯಲ್ಲಿ ನಿರ್ಮಿಸುವ ಮಂದಿರದ ಬದಲಿಗೆ ಬೇರೆ ಕಡೆ ಅಥವಾ ನಮ್ಮೂರಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವೆ' ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/high-level-probe-should-happen-on-yatnal-statement-says-siddaramaiah-805829.html"><strong>‘ಮಾರಿಷಿಯಸ್ನಲ್ಲಿ ಯಡಿಯೂರಪ್ಪ ಕುಟುಂಬದ ಅಕ್ರಮ ಹಣ’: ಯತ್ನಾಳ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ: ಸಿದ್ದರಾಮಯ್ಯ</strong></a></p>.<p>'ರಾಮ ಜನ್ಮ ಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದ್ದು, ದೇಣಿಗೆ ನೀಡುವುದರಲ್ಲಿ ತಪ್ಪೇನಿದೆ' ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಬೇರೆ ಯಾವುದೇ ಸ್ಥಳದಲ್ಲಿ ಮಂದಿರ ನಿರ್ಮಿಸಿದರೂ ಹಣ ನೀಡಬಹುದು. ಈಗ ಆರ್ಎಸ್ಎಸ್ನವರುಸಂಗ್ರಹಿಸುತ್ತಿರುವ ಹಣಕ್ಕೆ ರಸೀದಿ ಕೊಟ್ಟು, ಲೆಕ್ಕ ನೀಡುತ್ತಾರೇನು' ಎಂದು ಪ್ರಶ್ನಿಸಿದರು.</p>.<p>ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಕೆಲವರು ಗುರುತು ಇಟ್ಟುಕೊಂಡು ಬೆದರಿಕೆ ಒಡ್ಡಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರಂತೆ. ಅದಕ್ಕೆ ಪ್ರತಿಕ್ರಿಯೆ ನೀಡಲಾಗದು ಎಂದು ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>