‘ಪ್ರಜಾವಾಣಿ’ ಜತೆ ಮಾತನಾಡಿದ ಜಗದೀಶ ಶೆಟ್ಟರ್, ‘ನಾನು ಈ ಹಿಂದೆ ಸಭಾಧ್ಯಕ್ಷನಾಗಿ, ಸಚಿವನಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ಕಿರಿಯರಾದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸಂಪುಟದಲ್ಲಿ ಸಚಿವನಾಗಿ ಕೆಲಸ ಮಾಡುವ ಆಕಾಂಕ್ಷೆ ನನಗಿಲ್ಲ. ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧನಾಗಿದ್ದೇನೆ’ ಎಂದರು.