<p><strong>ಬೆಂಗಳೂರು</strong>: ಇದೇ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ’ ಎಂದರು.</p>.<p>‘ಪಕ್ಷದ ವರಿಷ್ಠರು ನನಗೆ ಯಾವುದೇ ಸೂಚನೆ ನೀಡಿದರೂ ಪಾಲಿಸುತ್ತೇನೆ. ನನ್ನ ಪರವಾಗಿ ಯಾರೂ ಹೇಳಿಕೆಗಳನ್ನು ನೀಡಬಾರದು ಮತ್ತು ಪ್ರತಿಭಟನೆ ನಡೆಸಬಾರದು’ ಎಂದು ಮನವಿ ಮಾಡಿದ್ದಾರೆ.</p>.<p>‘ಸದ್ಯದ ಸನ್ನಿವೇಶದಲ್ಲಿ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಯ ಬಗ್ಗೆ ಧನ್ಯವಾದ ಹೇಳುತ್ತೇನೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ಪ್ರಧಾನಿ ಮೋದಿ, ಅಮಿತ್ ಷಾ ಮತ್ತು ನಡ್ಡಾ ಅವರು ನನ್ನ ಮೇಲೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಇದೇ 26 ಕ್ಕೆ ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡುವ ಸೂಚನೆ ಪಾಲಿಸಲು ಸಿದ್ಧ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/leadership-crisis-in-bjp-seers-express-support-for-bs-yediyurappa-850421.html" target="_blank">ಬಿ.ಎಸ್ ಯಡಿಯೂರಪ್ಪ ಪರ ‘ಶ್ರೀ’ ಶಕ್ತಿ: ಮಠಾಧೀಶರ ಬೆಂಬಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇದೇ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ’ ಎಂದರು.</p>.<p>‘ಪಕ್ಷದ ವರಿಷ್ಠರು ನನಗೆ ಯಾವುದೇ ಸೂಚನೆ ನೀಡಿದರೂ ಪಾಲಿಸುತ್ತೇನೆ. ನನ್ನ ಪರವಾಗಿ ಯಾರೂ ಹೇಳಿಕೆಗಳನ್ನು ನೀಡಬಾರದು ಮತ್ತು ಪ್ರತಿಭಟನೆ ನಡೆಸಬಾರದು’ ಎಂದು ಮನವಿ ಮಾಡಿದ್ದಾರೆ.</p>.<p>‘ಸದ್ಯದ ಸನ್ನಿವೇಶದಲ್ಲಿ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಯ ಬಗ್ಗೆ ಧನ್ಯವಾದ ಹೇಳುತ್ತೇನೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ಪ್ರಧಾನಿ ಮೋದಿ, ಅಮಿತ್ ಷಾ ಮತ್ತು ನಡ್ಡಾ ಅವರು ನನ್ನ ಮೇಲೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಇದೇ 26 ಕ್ಕೆ ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡುವ ಸೂಚನೆ ಪಾಲಿಸಲು ಸಿದ್ಧ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/leadership-crisis-in-bjp-seers-express-support-for-bs-yediyurappa-850421.html" target="_blank">ಬಿ.ಎಸ್ ಯಡಿಯೂರಪ್ಪ ಪರ ‘ಶ್ರೀ’ ಶಕ್ತಿ: ಮಠಾಧೀಶರ ಬೆಂಬಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>