ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿ, ‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿಗೆ ಪತ್ರ ಕೊಟ್ಟಿದ್ದೆ. ಅವರು ಸಚಿವ ಸಂಪುಟದ ಮುಂದಿಡಲು ಪತ್ರದ ಮೇಲೆ ನೋಟ್ ಬರೆದರು. ಆ ಫೈಲ್ ಫಾಲೋಅಪ್ ಮಾಡಲು ಲೇಟರ್ನ ಫೋಟೋ ತೆಗೆದುಕೊಳ್ಳಲು ಕೇಳಿದೆ. ಆಗ, ಕಾರ್ಯದ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಣ್ಣದಾಗಿ ಸಿಡುಕಿದರು. ನನ್ನ ಮೇಲೆ ಸಿಡುಕಲು, ಕೋಪಿಸಿಕೊಳ್ಳಲು ಅವರಿಗೆ ಹಕ್ಕಿದೆ’ ಎಂದರು.