ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಕ್ಷ್ಮೀದೇವಿನಗರ ವಾರ್ಡ್ನಲ್ಲಿ ಗುರುವಾರ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಒಂದು ದಿನ ಕೃಷ್ಣಾದಲ್ಲಿ ಜನರ ಸಮಸ್ಯೆ ಆಲಿಸಿ, ಬಳಿಕ ಕಚೇರಿಗೆ ಹೋಗಿದ್ದೆ. ಅಲ್ಲಿ ಕಾದಿದ್ದ ಕಾಂಗ್ರೆಸ್ ಶಾಸಕರೊಬ್ಬರು ಎಷ್ಟು ಹೊತ್ತು ಕಾಯಬೇಕು ಎಂದು ರೇಗಿದರು. ಅವರು ತಂದಿದ್ದ ಪತ್ರಗಳನ್ನು ಇಸ್ಪೀಟ್ನಂತೆ ನನ್ನತ್ತ ಎಸೆದಿದ್ದರು’ ಎಂದರು.