ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಚೇರಿಗೆ ತಡವಾಗಿ ಬಂದರೆ ರೇಗುತ್ತಿದ್ದರು’

ಚುನಾವಣಾ ಪ್ರಚಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ
Last Updated 29 ಅಕ್ಟೋಬರ್ 2020, 17:21 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಷ್ಟೂ ದಿನ ಕಾಂಗ್ರೆಸ್‌ ಶಾಸಕರು ನಿರಂತರವಾಗಿ ನನಗೆ ಕಿರುಕುಳ ನೀಡಿದ್ದರು. ನಾನು ಕಚೇರಿಗೆ ತಡವಾಗಿ ಬಂದರೂ ಅವರು ರೇಗುತ್ತಿದ್ದರು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಕ್ಷ್ಮೀದೇವಿನಗರ ವಾರ್ಡ್‌ನಲ್ಲಿ ಗುರುವಾರ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಒಂದು ದಿನ ಕೃಷ್ಣಾದಲ್ಲಿ ಜನರ ಸಮಸ್ಯೆ ಆಲಿಸಿ, ಬಳಿಕ ಕಚೇರಿಗೆ ಹೋಗಿದ್ದೆ. ಅಲ್ಲಿ ಕಾದಿದ್ದ ಕಾಂಗ್ರೆಸ್‌ ಶಾಸಕರೊಬ್ಬರು ಎಷ್ಟು ಹೊತ್ತು ಕಾಯಬೇಕು ಎಂದು ರೇಗಿದರು. ಅವರು ತಂದಿದ್ದ ಪತ್ರಗಳನ್ನು ಇಸ್ಪೀಟ್‌ನಂತೆ ನನ್ನತ್ತ ಎಸೆದಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT