ಚುನಾವಣಾ ಆಮಿಷ ಕೋರ್ಟ್ಗೆ ಮೊರೆ: ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರಿಗೆ ಹಣ, ವಸ್ತುಗಳನ್ನು ಹಂಚುವ ವಿಷಯವನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯವನ್ನು ನ್ಯಾಯಾಲಯಕ್ಕೆ ಪಕ್ಷ ಕೊಂಡೊಯ್ಯಲಿದೆ. ಇಂತಹ ಆಮಿಷ ಪ್ರಕರಣಗಳನ್ನು ಪತ್ತೆ ಹಚ್ಚುವ ಸಲುವಾಗಿಯೇ ಬೆಂಗಳೂರಿನಲ್ಲಿ ವಾರ್ರೂಂ ಆರಂಭಿಸಲಾಗಿದ್ದು, 400 ಯುವಕರು ಇದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.