ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಲವು ವರ್ಷಗಳಿಂದ ಇತ್ತೀಚೆಗೆ ಕರ್ನಾಟಕದ ಸ್ವಾಯತ್ತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ತಮ್ಮ ಮೂಲ ಸ್ವರೂಪ ಹಾಗೂ ಧ್ಯೇಯಗಳಿಂದ ದೂರ ಸರಿಯುತ್ತಿವೆ. ಅವುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮುಂಚೂಣಿಯಲ್ಲಿದೆ. ಸರ್ವಜನರ ಪ್ರಾತಿನಿಧಿಕ ಸಂಸ್ಥೆಗಳಾಗಿದ್ದ ಇವು ಈಗ ಆಡಳಿತಶಾಹಿಯ ಭಾಗದಂತೆ ವರ್ತಿಸುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.