ವಾರಾಂತ್ಯದ ಕರ್ಫ್ಯೂವನ್ನು ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ನಿತ್ಯದ ದುಡಿಮೆಯಲ್ಲಿ ಬದುಕುವವರಿಗೆ ಇಂತಹ ಕ್ರಮಗಳಿಂದ ತೊಂದರೆ ಆಗಿದೆ. ಆದರೆ, ಕೊರೊನಾ ವೈರಾಣು ಸೋಂಕಿನಿಂದ ಬೆಂಗಳೂರಿನ ಜನರನ್ನು ರಕ್ಷಿಸಲು ಇದು ಅನಿವಾರ್ಯವಾಗಿದೆ. ಇಂತಹ ಸಮಯದಲ್ಲಿ ಪಾದಯಾತ್ರೆಯಿಂದ ಆತಂಕ ಸೃಷ್ಟಿಸುತ್ತಿದ್ದಾರೆ. ಬೆಂಗಳೂರಿನ ಜನರ ಪ್ರಾಣ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧ ಎಂದು ಹೇಳಿದರು.