ಬಿಜೆಪಿಯ ಸಿದ್ದು ಸವದಿ ಮಾತನಾಡಿ, ‘ದೊಡ್ಡ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳು ತಪ್ಪು ಅಭಿಪ್ರಾಯ ಮೂಡಿಸಿ ಹೋರಾಟ ಹುಟ್ಟು ಹಾಕಿದ್ದಾರೆ. ನಾವು ಬೆಳೆಯುವ ಗೋಧಿ, ಗೋವಿನ ಜೋಳ, ಹೆಸರು ಇತ್ಯಾದಿಗಳಿಗೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉತ್ತಮ ಬೆಲೆ ಸಿಗುತ್ತದೆ ಎಂಬ ಕಾರಣಕ್ಕೆ ಕದ್ದು ಮುಚ್ಚಿ ರಾತ್ರಿ ವೇಳೆ ಸಾಗಿಸುತ್ತೇವೆ. ಇದನ್ನು ತಡೆಯಲು ಎಪಿಎಂಸಿಯವರು ಕಾದು ನಿಂತಿರುತ್ತಾರೆ’ ಎಂದು ಹೇಳಿದರು.