ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಪುನಃ ಸಾವಿರ ದಾಟಿದೆ. ಶನಿವಾರ ಒಂದೇ ದಿನ ಏಳು ಜನ ಮೃತಪಟ್ಟಿದ್ದಾರೆ. ಪ್ರಕರಣ ಹೆಚ್ಚಾಗುತ್ತಿರುವುದನ್ನು ಒಪ್ಪಿಕೊಳ್ಳಲೇಬೇಕು. ಸರ್ಕಾರ ಲಸಿಕೆ ನೀಡುತ್ತಿದೆ. ಆದರೆ, ಸಾರ್ವಜನಿಕರೂ ಕೂಡಾ ಜವಾಬ್ದಾರಿಯಿಂದ ವರ್ತಿಸಬೇಕು. ನೀವು ಸುರಕ್ಷಿತವಾಗಿದ್ದರೆ, ನಿಮ್ಮ ಮನೆ ಮಂದಿಯೂ ಸುರಕ್ಷಿತವಾಗಿರುತ್ತಾರೆ. ಸೋಂಕು ಹೆಚ್ಚುತ್ತಾ ಹೋದರೆ ಸರ್ಕಾರವೂ ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.