ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಹಗರಣ | ಧಮ್ ಇದ್ದರೆ ತನಿಖೆ ನಡೆಸಿ: ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲು

ದಾಖಲೆಗಳನ್ನು ರಾಹುಲ್‌ಗೆ ಕಳುಹಿಸುತ್ತೀರಿ?
Last Updated 19 ಅಕ್ಟೋಬರ್ 2022, 9:53 IST
ಅಕ್ಷರ ಗಾತ್ರ

ಮೈಸೂರು: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ದಾಖಲೆಗಳನ್ನು ರಾಹುಲ್‌ ಗಾಂಧಿಗೆ ಕಳುಹಿಸುತ್ತೀರೇಕೆ? ನಿಮಗೆ ಧಮ್ ಇದ್ದರೆ ಸಚಿವ ಸಂ‍ಪುಟದಲ್ಲಿಟ್ಟು ತನಿಖೆ ಮಾಡಿಸಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು.

ಮುಖ್ಯಮಂತ್ರಿಯು ಬೀದರ್ ಜಿಲ್ಲೆಯ ಔರಾದ್‌ನಲ್ಲಿ ನಡೆದ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ನೀಡಿದ್ದ ಹೇಳಿಕೆಗೆ ಇಲ್ಲಿ ತಿರುಗೇಟು ಕೊಟ್ಟ ಅವರು, ‘ದಾಖಲೆಗಳನ್ನು ರಾಹುಲ್‌ಗೆ ಕಳುಹಿಸಿ ಏನು ಮಾಡುತ್ತೀರಿ? ನೀನು ಅತ್ತಂಗೆ ಮಾಡು, ನಾನು ಹೊಡೆದಂತೆ ಮಾಡುತ್ತೇನೆ ಎನ್ನುವ ಥರದ ಮಾತುಗಳನ್ನು ಬಿಡಿ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT