‘ನಮ್ಮದು ಬಹುಮುಖೀ ರಾಷ್ಟ್ರವಾದರೂ ಏಕರೂಪದ ಶಿಕ್ಷಣ ಇಲ್ಲಿಲ್ಲ. ಈಗ ದೇಶದಲ್ಲಿ ಏಕರೂಪ ಶಿಕ್ಷಣ ಅನಿವಾರ್ಯ ಅನ್ನಿಸುತ್ತಿದೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಬಲ್ಲಿದರು ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ. ಎಲ್ಲರಿಗೂ ಒಂದೇ ರೀತಿ ಶಿಕ್ಷಣ ದೊರೆಯುವಂತಾಗಬೇಕು. ಆಗ ಮಾತ್ರ ಸಮಾನತೆ ಸಾಧ್ಯ. ಅನುಭವ ಮಂಟಪದ ಮಾದರಿಯಲ್ಲಿ ಎಲ್ಲರಿಗೂ (ಹಿಂದುಳಿದವರಿಗೆ) ಹೆಚ್ಚಿನ ಅವಕಾಶ ಸಿಗುವಂತಾಗಬೇಕು. ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಏಕರೂಪ ಶಿಕ್ಷಣ ಜಾರಿಗೆ ತರುವ ನಿಟ್ಟಿನಲ್ಲಿ ದೇಶದ ಸಂವಿಧಾನದಲ್ಲಿ ಮಾರ್ಪಾಟು ಮಾಡುವುದು ಸೂಕ್ತವಾದೀತು’ ಎಂದಿದ್ದಾಗಿ ಅವರು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.