<p><strong>ಬೆಂಗಳೂರು</strong>: ಭೂರಹಿತರಾಗಿರುವ16 ಲಕ್ಷ ಕೃಷಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ‘ರೈತ ವಿದ್ಯಾನಿಧಿ’ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಪೌಷ್ಟಿಕ ಆಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 76ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಭೂರಹಿತ ಕೃಷಿ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತಾ ವಲಯಗಳೆಂದು ಗುರುತಿಸಿ, 4,050 ಅಂಗನವಾಡಿಗ<br />ಳನ್ನು ತೆರೆಯಲಾಗುವುದು. ಇದರಿಂದ 8,100 ಮಹಿಳೆಯರಿಗೆ ಉದ್ಯೋಗ ದೊರಕಲಿದೆ. ಪೌಷ್ಟಿಕ ಆಹಾರದ ಜತೆಗೆ, ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವ ಕುಶಲಕರ್ಮಿಗಳಿಗೆ ತಲಾ ₹ 50 ಸಾವಿರ ಸಾಲ–ಸಹಾಯಧನ ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ಕಡ್ಡಾಯಗೊಳಿಸಲಾಗಿದೆ. ಅದಕ್ಕಾಗಿ ₹ 250 ಕೋಟಿ ಮೀಸಲಿಡಲಾಗಿದೆ ಎಂದು ವಿವರ ನೀಡಿದರು.</p>.<p>75ನೇ ಸ್ವಾತಂತ್ರ್ಯ ಮಹೋತ್ಸವದ ಸಮಯದಲ್ಲಿ ಸರ್ಕಾರ ಘೋಷಿಸಿದ್ದ ಶಿಕ್ಷಣ, ಆರೋಗ್ಯ, ಕೌಶಲ, ಸ್ವಚ್ಛತೆ, ನಗರ, ಗ್ರಾಮೀಣ, ಅಂಗನವಾಡಿ, ಮಹಿಳಾ ಸ್ವಸಹಾಯ ಸಂಘಗಳು, ರೈತ ಅಭಿವೃದ್ಧಿ ಯೋಜನೆಗಳ ಸೌಲಭ್ಯಗಳನ್ನು ಒಂದು ವರ್ಷದ ಅವಧಿಯಲ್ಲಿ ಸಾಕಾರಗೊಳಿಸಲಾಗಿದೆ ಎಂದರು.</p>.<p>ಕರ್ನಾಟಕ ಸೌಹಾರ್ದ, ಸಾಮರಸ್ಯಕ್ಕೆ ಹೆಸರಾದ ರಾಜ್ಯ. ಸಾಮರಸ್ಯ ಕದಡುವ ಪ್ರಯತ್ನಗಳನ್ನು ನಮ್ಮ ಪೊಲೀಸ್ ವ್ಯವಸ್ಥೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿದೆ. ವಿಚ್ಛಿದ್ರಕಾರಕ ಶಕ್ತಿಗಳು ತಲೆ ಎತ್ತಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ನೆಹರೂ ಸ್ಮರಿಸಿದ ಬೊಮ್ಮಾಯಿ</p>.<p>ರಾಜ್ಯ ಸರ್ಕಾರ ಆ.14ರಂದು ಮಾಧ್ಯಮಗಳಿಗೆ ನೀಡಿದ್ದ ಸ್ವತ್ರಂತ್ರ್ಯದ ಅಮೃತ ಮಹೋತ್ಸವ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಹೆಸರು ಕೈಬಿಡಲಾಗಿತ್ತು. ಸರ್ಕಾರದ ಈ ನಡೆಗೆ ಕಾಂಗ್ರೆಸ್ ಸೇರಿದಂತೆ ಸಾರ್ವಜನಿಕ ವಲಯದಿಂದಲೂ ವಿರೋಧ ವ್ಯಕ್ತವಾಗಿತ್ತು. ಸೋಮವಾರ ಧ್ವಜಾರೋಹಣ ನಂತರ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ ಭಾಷಣದಲ್ಲಿ ನೆಹರೂ ಅವರನ್ನು ಸ್ಮರಿಸಿದರು.</p>.<p>ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಸಂಖ್ಯಾತರು ತ್ಯಾಗ, ಬಲಿದಾನ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಸುಭಾಷ್ಚಂದ್ರ ಬೋಸ್, ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ಲಾಲ್ ನೆಹರೂ ಮೊದಲಾದ ಮಹನೀಯರ ಹೋರಾಟ ಚರಿತ್ರಾರ್ಹವಾದುದು ಎಂದರು.</p>.<p>ಟಿಪ್ಪು, ಧರ್ಮ ಉಲ್ಲೇಖಿಸದ ಸಿಎಂ</p>.<p>ಭಾಷಣದಲ್ಲಿ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮೊದಲಾದ ಮಹನೀಯರು ಬ್ರಿಟಿಷರ ವಿರುದ್ಧ ನಡೆಸಿದ್ದ ಹೋರಾಟ ಸ್ಮರಿಸಿದರು. ಆದರೆ, ಟಿಪ್ಪು ಹೆಸರು ಉಲ್ಲೇಖಿಸಲಿಲ್ಲ.</p>.<p>ವಿವಿಧ ಭಾಷೆ, ಸಂಸ್ಕೃತಿ, ಜೀವನ ಶೈಲಿ ಇದ್ದರೂ ಭಾರತೀಯತೆ ನಮ್ಮೆಲ್ಲರನ್ನೂ ಬೆಸೆಯುವ ಬಂಧ ಎಂದು ಉಲ್ಲೇಖಿಸಿದರೂ, ‘ವಿವಿಧ ಧರ್ಮ’ ಪದವನ್ನು ಬಳಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭೂರಹಿತರಾಗಿರುವ16 ಲಕ್ಷ ಕೃಷಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ‘ರೈತ ವಿದ್ಯಾನಿಧಿ’ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಪೌಷ್ಟಿಕ ಆಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 76ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಭೂರಹಿತ ಕೃಷಿ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತಾ ವಲಯಗಳೆಂದು ಗುರುತಿಸಿ, 4,050 ಅಂಗನವಾಡಿಗ<br />ಳನ್ನು ತೆರೆಯಲಾಗುವುದು. ಇದರಿಂದ 8,100 ಮಹಿಳೆಯರಿಗೆ ಉದ್ಯೋಗ ದೊರಕಲಿದೆ. ಪೌಷ್ಟಿಕ ಆಹಾರದ ಜತೆಗೆ, ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವ ಕುಶಲಕರ್ಮಿಗಳಿಗೆ ತಲಾ ₹ 50 ಸಾವಿರ ಸಾಲ–ಸಹಾಯಧನ ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ಕಡ್ಡಾಯಗೊಳಿಸಲಾಗಿದೆ. ಅದಕ್ಕಾಗಿ ₹ 250 ಕೋಟಿ ಮೀಸಲಿಡಲಾಗಿದೆ ಎಂದು ವಿವರ ನೀಡಿದರು.</p>.<p>75ನೇ ಸ್ವಾತಂತ್ರ್ಯ ಮಹೋತ್ಸವದ ಸಮಯದಲ್ಲಿ ಸರ್ಕಾರ ಘೋಷಿಸಿದ್ದ ಶಿಕ್ಷಣ, ಆರೋಗ್ಯ, ಕೌಶಲ, ಸ್ವಚ್ಛತೆ, ನಗರ, ಗ್ರಾಮೀಣ, ಅಂಗನವಾಡಿ, ಮಹಿಳಾ ಸ್ವಸಹಾಯ ಸಂಘಗಳು, ರೈತ ಅಭಿವೃದ್ಧಿ ಯೋಜನೆಗಳ ಸೌಲಭ್ಯಗಳನ್ನು ಒಂದು ವರ್ಷದ ಅವಧಿಯಲ್ಲಿ ಸಾಕಾರಗೊಳಿಸಲಾಗಿದೆ ಎಂದರು.</p>.<p>ಕರ್ನಾಟಕ ಸೌಹಾರ್ದ, ಸಾಮರಸ್ಯಕ್ಕೆ ಹೆಸರಾದ ರಾಜ್ಯ. ಸಾಮರಸ್ಯ ಕದಡುವ ಪ್ರಯತ್ನಗಳನ್ನು ನಮ್ಮ ಪೊಲೀಸ್ ವ್ಯವಸ್ಥೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿದೆ. ವಿಚ್ಛಿದ್ರಕಾರಕ ಶಕ್ತಿಗಳು ತಲೆ ಎತ್ತಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ನೆಹರೂ ಸ್ಮರಿಸಿದ ಬೊಮ್ಮಾಯಿ</p>.<p>ರಾಜ್ಯ ಸರ್ಕಾರ ಆ.14ರಂದು ಮಾಧ್ಯಮಗಳಿಗೆ ನೀಡಿದ್ದ ಸ್ವತ್ರಂತ್ರ್ಯದ ಅಮೃತ ಮಹೋತ್ಸವ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಹೆಸರು ಕೈಬಿಡಲಾಗಿತ್ತು. ಸರ್ಕಾರದ ಈ ನಡೆಗೆ ಕಾಂಗ್ರೆಸ್ ಸೇರಿದಂತೆ ಸಾರ್ವಜನಿಕ ವಲಯದಿಂದಲೂ ವಿರೋಧ ವ್ಯಕ್ತವಾಗಿತ್ತು. ಸೋಮವಾರ ಧ್ವಜಾರೋಹಣ ನಂತರ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ ಭಾಷಣದಲ್ಲಿ ನೆಹರೂ ಅವರನ್ನು ಸ್ಮರಿಸಿದರು.</p>.<p>ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಸಂಖ್ಯಾತರು ತ್ಯಾಗ, ಬಲಿದಾನ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಸುಭಾಷ್ಚಂದ್ರ ಬೋಸ್, ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ಲಾಲ್ ನೆಹರೂ ಮೊದಲಾದ ಮಹನೀಯರ ಹೋರಾಟ ಚರಿತ್ರಾರ್ಹವಾದುದು ಎಂದರು.</p>.<p>ಟಿಪ್ಪು, ಧರ್ಮ ಉಲ್ಲೇಖಿಸದ ಸಿಎಂ</p>.<p>ಭಾಷಣದಲ್ಲಿ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮೊದಲಾದ ಮಹನೀಯರು ಬ್ರಿಟಿಷರ ವಿರುದ್ಧ ನಡೆಸಿದ್ದ ಹೋರಾಟ ಸ್ಮರಿಸಿದರು. ಆದರೆ, ಟಿಪ್ಪು ಹೆಸರು ಉಲ್ಲೇಖಿಸಲಿಲ್ಲ.</p>.<p>ವಿವಿಧ ಭಾಷೆ, ಸಂಸ್ಕೃತಿ, ಜೀವನ ಶೈಲಿ ಇದ್ದರೂ ಭಾರತೀಯತೆ ನಮ್ಮೆಲ್ಲರನ್ನೂ ಬೆಸೆಯುವ ಬಂಧ ಎಂದು ಉಲ್ಲೇಖಿಸಿದರೂ, ‘ವಿವಿಧ ಧರ್ಮ’ ಪದವನ್ನು ಬಳಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>