ಇಳಕಲ್ನ ಗೌಳೇದಗುಡಿ ಬಳಿಯ ನಿವಾಸಿ ಮುಕುಂದ ತಿರುಪಾಳಿ ಅವರು ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ಹೊರಟಾಗ ಅಲ್ಲಿನ ಗೋರಬಾಳ ನಾಕಾದ ಹತ್ತಿರ ಇರುವ ಗೊಂಗಡಶೆಟ್ಟಿ ಕಲ್ಯಾಣಮಂಟಪದ ಹತ್ತಿರ ಗಮನ ಬೇರೆಡೆಗೆ ಸೆಳೆದು ₹1 ಲಕ್ಷ ಲೂಟಿ ಮಾಡಿ ಪರಾರಿಯಾಗಿದ್ದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯಪುರ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂಕೃತ್ಯ ನಡೆಸಿರುವುದು ಬಯಲಾಗಿದೆ.