ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ ತನಿಖಾ ತಂಡ ವಶಪಡಿಸಿಕೊಂಡಿದ್ದ ಕಬ್ಬಿಣದ ಅದಿರನ್ನು ಕಳ್ಳಸಾಗಣೆ ಮಾಡಿದ್ದ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿತ್ತು. 2009–10ರ ಅವಧಿಯಲ್ಲಿ ರಾಜಮಹಲ್ ಸಿಲ್ಕ್ಸ್ ಕಂಪನಿಯು ಅಕ್ರಮ ಗಣಿಗಾರಿಕೆ ಮೂಲಕ ತೆಗೆದ ಅದಿರನ್ನು ಕಳ್ಳಸಾಗಣೆ ಮಾಡಿ, ರಫ್ತು ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಸಿಬಿಐ ಅಧಿಕಾರಿಗಳು ಅಂಕೋಲಾ ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.