ಬೆಂಗಳೂರು: ಮಂಡ್ಯ ಜಿಲ್ಲೆ ಕೆ.ಆರ್.ಎಸ್ ಸುತ್ತಮುತ್ತ ಸುಮಾರು 40ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಅಣೆಕಟ್ಟು ಮಾತ್ರವಲ್ಲದೆ, ರೈತರ ಜನ ಜೀವನಕ್ಕೂ ತೊಂದರೆ ಆಗಿದೆ. ಈ ಅಕ್ರಮ ದಂಧೆಯ ಸಂಪೂರ್ಣ ದಾಖಲೆಗಳನ್ನು ಮುಂದಿನ ವಾರ ಬಹಿರಂಗಪಡಿಸುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹೇಳಿದ್ದಾರೆ.