ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ರಾಜ್ಯ ಮಟ್ಟದ ತನಿಖಾ ದಳವು ಎಂಎಸ್ಪಿ ಭತ್ತ ಖರೀದಿ, ಹಲ್ಲಿಂಗ್ ಮತ್ತು ಅಕ್ಕಿ ಸಾಗಣೆ ಸಂಬಂಧ ತನಿಖೆ ನಡೆಸುತ್ತಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಘದ ಅಧ್ಯಕ್ಷ ಎಂ.ಎಸ್. ರಮೇಶ್, ‘ಸರ್ಕಾರ ಖರೀದಿ ಮಾಡಿಕೊಟ್ಟ ಭತ್ತವನ್ನು ಹಲ್ಲಿಂಗ್ ಮಾಡಿ ಅಕ್ಕಿ ಪೂರೈಸುವ ಕೆಲಸವನ್ನು ಹೆಚ್ಚಿನ ಅಕ್ಕಿ ಗಿರಣಿಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ನಿರ್ವಹಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.