ಐ ಮಾನಿಟರಿಂಗ್ ಅಡ್ವೈಸರಿ(ಐಎಂಎ) ಹಗರಣದಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಕಾಯ್ದೆಯಡಿ(ಕೆಪಿಐಡಿ) ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರದಿಂದ ಬೇಗ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪಿಎಂಎಲ್ ಕಾಯ್ದೆಯಡಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ, ಇತ್ತೀಚೆಗೆ ಶೋಧ ನಡೆಸಿದೆ. ಇದು ಸಕ್ಷಮ ಪ್ರಾಧಿಕಾರದ ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಗಮನಿಸಿದ ಪೀಠ, ಈ ಆದೇಶ ನೀಡಿತು.