ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ, ಸಿಎಂ ವರ್ಚಸ್ಸಿಗೆ ಧಕ್ಕೆ: ರೇಣುಕಾಚಾರ್ಯ

Last Updated 29 ಜನವರಿ 2021, 19:38 IST
ಅಕ್ಷರ ಗಾತ್ರ

ಬೆಂಗಳೂರು: ಸಚಿವರ ಖಾತೆ ಗಳ ಹಂಚಿಕೆಯಲ್ಲಿ ಆದ ಗೊಂದಲದಿಂದ ಮುಖ್ಯಮಂತ್ರಿ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಯಾವುದೇ ಕಾರಣಕ್ಕೂ ಸರ್ಕಾ ರಕ್ಕೆ ಮುಜುಗರ ಆಗಬಾರದು. ಮುಂದಿನ ಎರಡು ವರ್ಷ ಸ್ಥಿರ ಆಡಳಿತ ಇರಬೇಕು ಎಂಬುದು ನಮ್ಮ ಅಪೇಕ್ಷೆ’ ಎಂದರು.

‘ವಲಸೆ ಬಂದವರು ಇಂಥದ್ದೇ ಖಾತೆಗಳನ್ನು ನೀಡ ಬೇಕು ಎಂದು ಪಟ್ಟು ಹಿಡಿದರು. ಕೆಲವರಿಗೆ 2–3 ಖಾತೆಗಳನ್ನು ನೀಡಲಾಯಿತು. ಪಕ್ಷಕ್ಕೆ ಕೆಲಸ ಮಾಡಿದವರು ನಾವು, ಅಧಿಕಾರ ಅನುಭವಿಸುವವರು ಅವರು’ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.

‘ಇನ್ನು ಮುಂದೆ ನಾನು ಬಹಿರಂಗವಾಗಿ ಹೆಚ್ಚು ಮಾತನಾಡುವುದಿಲ್ಲ. ಏನು ಹೇಳ ಬೇಕಿದ್ದರೂ ಅದನ್ನು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT