ಸಾಧಕರಿಗೆ ಸನ್ಮಾನ
ಕನ್ನಡದ ಹಿರಿಯ ಕಾದಂಬರಿಗಾರ್ತಿ ಉಡುಪಿಯ ಉಷಾ ಪಿ.ರೈ, ಗುಬ್ಬಿ ತಾಲ್ಲೂಕು ಕಲ್ಲೂರಿನ ಹಿರಿಯ ವಿಮರ್ಶಕ ಪ್ರೊ. ಕೆ.ಜಿ.ನಾಗರಾಜಪ್ಪ, ಸಾಹಿತಿ ಮತ್ತು ಪತ್ರಿಕೋದ್ಯಮಿ ಡಾ.ಬಾಬು ಕೃಷ್ಣಮೂರ್ತಿ, ಕೊಪ್ಪಳದ ವಿದ್ವಾಂಸ ಡಾ.ವೀರಣ್ಣ ರಾಜೂರ, ಚಿತ್ರದುರ್ಗದ ಹಿರಿಯ ಸಂಶೋಧಕ ಪ್ರೊ.ಲಕ್ಷ್ಮಣ ತೆಲಗಾವಿ ಅವರಿಗೆ 2019ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.