ಕೃಷಿ ಉದ್ಯಮ ನೀತಿ ಜಾರಿಗೆ ಚಿಂತನೆ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಖುರ್ಸಾಪುರ ಗ್ರಾಮದಲ್ಲಿ ‘ಶಿಗ್ಗಾವಿ ಜವಳಿ ಪಾರ್ಕ್’ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬೊಮ್ಮಾಯಿ, ‘ರೈತರ ಬದುಕನ್ನು ಹಸನುಗೊಳಿಸಲು ಕೃಷಿ ನೀತಿಯಲ್ಲಿ ಬದಲಾವಣೆ ತರುವುದರೊಂದಿಗೆ ‘ಕೃಷಿ ಉದ್ಯಮ ನೀತಿ’ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ’ ಎಂದರು.