ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಾಗದೇ ಇರುವಂತೆ ಪ್ರಯತ್ನಿಸಿದವರೂ ಇದ್ದಾರೆ, ಆದರೆ ನಮ್ಮ ಮುಖ್ಯಮಂತ್ರಿ ಚಾಣಕ್ಯರು, ಚಾಣಕ್ಯ ವಿದ್ಯೆ ಪ್ರಯೋಗ ಮಾಡಿ, ಮೀಸಲಾತಿ ಹೆಚ್ಚಳದ ದೃಢ ನಿರ್ಧಾರ ತೆಗೆದುಕೊಂಡಿದ್ದು ಅಲ್ಲದೆ, ಸುಗ್ರೀವಾಜ್ಞೆಯನ್ನೂ ಹೊರಡಿಸಿದರು’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.