‘ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ವಿಶುಕುಮಾರ್, ಎಚ್ಬಿಆರ್ ಲೇಔಟ್ 5ನೇ ಹಂತದಲ್ಲಿ ವಾಸವಿದ್ದರು. ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇವರ ಸಾವಿನ ಬಗ್ಗೆ ತಂದೆ ನಾರಾಯಣ ಭಟ್ ದೂರು ನೀಡಿದ್ದಾರೆ. ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹೆಣ್ಣೂರು ಪೊಲೀಸರು ಹೇಳಿದರು.