ಬೆಂಗಳೂರು: ಸೇನೆಯ ಆಗು–ಹೋಗು, ಅನಿವಾರ್ಯತೆಗಳ ಬಗ್ಗೆ ಮಾತನಾಡಬೇಕಿರುವುದು ಸೇನಾ ಮುಖ್ಯಸ್ಥರೇ ಹೊರತು ಕಾಂಗ್ರೆಸ್ ನಾಯಕರಲ್ಲ ಎಂದು ಬಿಜೆಪಿ ಟೀಕಿಸಿದೆ.
‘ಅಗ್ನಿಪಥ’ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿರುವ ಬಿಜೆಪಿ ಟ್ವಿಟರ್ನಲ್ಲಿ ಅಸಮಾಧಾನ ಹೊರಹಾಕಿದೆ.
‘ಅಗ್ನಿಪಥ ಯೋಜನೆಯಿಂದ ಸೇನೆಯ ರೆಜಿಮೆಂಟ್ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲವೆಂದು ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ’ ಎಂದು ಬಿಜೆಪಿ ಪ್ರಶ್ನಿಸಿದೆ.
‘ಅಗ್ನಿಪಥ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಗೆ ಪ್ರೇರಣೆ ನೀಡಬಲ್ಲ ಏಕೈಕ ಮಾರ್ಗವಿದು ಎಂದು ಅನಿಲ್ ಪುರಿ ಹೇಳಿದ್ದಾರೆ. ಕಾಂಗ್ರೆಸ್ಸಿಗರೇ, ಮೂರು ಸೇನಾಪಡೆಗಳ ಮುಖ್ಯಸ್ಥರು ಅಗ್ನಿಪಥ ಯೋಜನೆ ಸ್ವಾಗತಿಸಿದ್ದಾರೆ, ನೀವೇಕೆ ದೇಶದ ವಿರುದ್ಧ ಹೋಗುತ್ತಿದ್ದೀರಿ’ ಎಂದು ಪ್ರಶ್ನಿಸಿರುವ ಬಿಜೆಪಿ #CONgressAgnipathToolKit ಎಂಬ ಹ್ಯಾಷ್ಟ್ಯಾಗ್ ಅನ್ನು ಉಲ್ಲೇಖಿಸಿದೆ.
‘ಅಗ್ನಿವೀರರಿಂದ ಸೇನೆಯ ಸಾಮರ್ಥ್ಯ ಕುಂದುವುದಿಲ್ಲ. ಬದಲಾಗಿ ತಾರುಣ್ಯ ತುಂಬುತ್ತದೆ. ಅಗ್ನಿವೀರ್ ಎಂಬ ಪದನಾಮವೇ ಶೌರ್ಯ ಪ್ರಶಸ್ತಿಗೆ ಅರ್ಹತೆಯಾಗಬಲ್ಲದು. ಅಗ್ನಿಪಥ ಯೋಜನೆಯ ಮೂಲಕ ಸೇನಾಪಡೆಗೆ ಅತ್ಯುತ್ತಮ ಪ್ರತಿಭೆಗಳು ಸೇರಿಕೊಳ್ಳಲಿದ್ದಾರೆ. ಸೇನೆಯನ್ನು ದುರ್ಬಲವಾಗಿಸುವುದು ಕಾಂಗ್ರೆಸ್ ಆಶಯವೇ’ ಎಂದು ಬಿಜೆಪಿ ಕಿಡಿಕಾರಿದೆ.
‘ಸೇನೆಗೆ ಸೇರಲಿಚ್ಛಿಸುವವರು ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿಲ್ಲ ಎಂದು ಪ್ರಮಾಣಪತ್ರ ನೀಡುವುದು ಕಡ್ಡಾಯ ಎಂದು ಅನಿಲ್ ಪುರಿ ತಿಳಿಸಿದ್ದಾರೆ. ಯುವಜನತೆಯನ್ನು ಪ್ರತಿಭಟನೆ, ಗಲಭೆ, ದೊಂಬಿಯ ಹಾದಿ ಹಿಡಿಸಿದ ಕಾಂಗ್ರೆಸ್ ಇವರೆಲ್ಲರ ಅವಕಾಶ ಕಿತ್ತುಕೊಂಡಿದೆ’ ಎಂದು ಬಿಜೆಪಿ ಗುಡುಗಿದೆ.
‘ಅಗ್ನಿಪಥ ಯೋಜನೆಯ ಮೂಲಕ ಸೇವೆ ಸಲ್ಲಿಸಿ ಹೊರಬರುವ ಅಗ್ನಿವೀರರಿಗೆ ದೇಶಕ್ಕೆ ದೇಶವೇ ಉದ್ಯೋಗಾವಕಾಶಗಳ ಭರವಸೆ ನೀಡುತ್ತಿದೆ. ಭಾರತದ ದೈತ್ಯ ಉದ್ಯಮ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳು ಉದ್ಯೋಗದ ಭರವಸೆ ನೀಡಿವೆ. ಆದರೂ, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿರತವಾಗಿದೆ’ ಎಂದು ಬಿಜೆಪಿ ಆರೋಪಿಸಿದೆ.
ಸೇನೆಯ ಆಗುಹೋಗು, ಅನಿವಾರ್ಯತೆಯ ಬಗ್ಗೆ ಮಾತನಾಡಬೇಕಿರುವುದು ಸೇನಾ ಮುಖ್ಯಸ್ಥರೇ ಹೊರತು ಕಾಂಗ್ರೆಸ್ ನಾಯಕರಲ್ಲ.
— BJP Karnataka (@BJP4Karnataka) June 22, 2022
ಅಗ್ನಿಪಥ್ ಯೋಜನೆಯಿಂದ ಸೇನೆಯ ರೆಜಿಮೆಂಟ್ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗುವುದಿಲ್ಲವೆಂದು ಅನಿಲ್ ಪುರಿ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ಸಿಗರೇ, ಸೇನೆಯ ವಿಚಾರದಲ್ಲಿ ರಾಜಕೀಯವೇಕೆ?#CONgressAgnipathToolKit
ಅಗ್ನಿಪಥ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಗೆ ಪ್ರೇರಣೆ ನೀಡಬಲ್ಲ ಏಕೈಕ ಮಾರ್ಗವಿದು - ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ.
— BJP Karnataka (@BJP4Karnataka) June 22, 2022
ಕಾಂಗ್ರೆಸ್ಸಿಗರೇ, 3 ಸೇನಾಪಡೆಗಳ ಮುಖ್ಯಸ್ಥರು #Agnipath ಯೋಜನೆ ಸ್ವಾಗತಿಸಿದ್ದಾರೆ, ನೀವೇಕೆ ದೇಶದ ವಿರುದ್ಧ ಹೋಗುತ್ತಿದ್ದೀರಿ?#CONgressAgnipathToolKit
ಅಗ್ನಿವೀರರಿಂದ ಸೇನೆಯ ಸಾಮರ್ಥ್ಯ ಕುಂದುವುದಿಲ್ಲ. ಬದಲಾಗಿ ತಾರುಣ್ಯ ತುಂಬುತ್ತದೆ. ಅಗ್ನಿವೀರ್ ಎಂಬ ಪದನಾಮವೇ ಶೌರ್ಯ ಪ್ರಶಸ್ತಿಗೆ ಅರ್ಹತೆಯಾಗಬಲ್ಲುದು.
— BJP Karnataka (@BJP4Karnataka) June 22, 2022
ಅಗ್ನಿಪಥ್ ಯೋಜನೆಯ ಮೂಲಕ ಸೇನಾಪಡೆಗೆ ಅತ್ಯುತ್ತಮ ಪ್ರತಿಭೆಗಳು ಸೇರಿಕೊಳ್ಳಲಿದ್ದಾರೆ.
ಸೇನೆಯನ್ನು ದುರ್ಬಲವಾಗಿಡುವುದು ಕಾಂಗ್ರೆಸ್ ಆಶಯವೇ?#CONgressAgnipathToolKit
ಸೇನೆಗೆ ಸೇರಲಿಚ್ಛಿಸುವವರು ಅಗ್ನಿಪಥ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿಲ್ಲ ಎಂದು ಪ್ರಮಾಣಪತ್ರ ನೀಡುವುದು ಕಡ್ಡಾಯ - ಅನಿಲ್ ಪುರಿ
— BJP Karnataka (@BJP4Karnataka) June 22, 2022
ಯುವಜನತೆಯನ್ನು ಪ್ರತಿಭಟನೆ, ಗಲಭೆ, ದೊಂಬಿಯ ಹಾದಿ ಹಿಡಿಸಿದ ಕಾಂಗ್ರೆಸ್ ಇವರೆಲ್ಲರ ಅವಕಾಶ ಕಿತ್ತುಕೊಂಡಿದೆ.#CONgressAgnipathToolKit
ಅಗ್ನಿಪಥ್ ಯೋಜನೆಯ ಮೂಲಕ ಸೇವೆ ಸಲ್ಲಿಸಿ ಹೊರಬರುವ ಅಗ್ನಿವೀರರಿಗೆ ದೇಶಕ್ಕೆ ದೇಶವೇ ಉದ್ಯೋಗಾವಕಾಶಗಳ ಭರವಸೆ ನೀಡುತ್ತಿದೆ.
— BJP Karnataka (@BJP4Karnataka) June 22, 2022
ಭಾರತದ ದೈತ್ಯ ಉದ್ಯಮ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳು ಉದ್ಯೋಗದ ಭರವಸೆ ನೀಡಿವೆ.
ಆದರೂ, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿರತವಾಗಿದೆ.#CONgressAgnipathToolKit
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.