ಮಧ್ಯಾಹ್ನ 1 ಗಂಟೆಗೆ ಸಚೇತ್ ಮತ್ತು ಸುಜೀತ್ ಹಡಗುಗಳು ಬೋಟ್ ಇರುವ ಸ್ಥಳಕ್ಕೆ ಬಂದಿದ್ದು, ಕೂಡಲೇ ಬೋಟ್ನಲ್ಲಿದ್ದ 11 ಜನರನ್ನು ರಕ್ಷಣೆ ಮಾಡಿದವು. ಗಾಯಗೊಂಡಿದ್ದ ಮೀನುಗಾರರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಎಲ್ಲರನ್ನು ಎನ್ಎಂಪಿಟಿಗೆ ಕರೆತಂದಿದ್ದು, ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್ ಸಿ.ಜಿ. ವೆಂಕಟೇಶ್ ತಿಳಿಸಿದ್ದಾರೆ.