<p><strong>ಧಾರವಾಡ</strong>: ‘ಸೌಹಾರ್ದ ಕದಡಿರುವ ಈ ಹೊತ್ತಿನಲ್ಲಿ ಭಾವೈಕ್ಯ ಸಾರುವಲ್ಲಿ ಭಾರತೀಯ ಸಂಗೀತವು ಮುಖ್ಯ ಪಾತ್ರವನ್ನು ವಹಿಸುತ್ತಿದೆ’ ಎಂದು ಭಾಷಾತಜ್ಞ ಡಾ.ಗಣೇಶ ಎನ್.ದೇವಿ ಅವರು ಅಭಿಪ್ರಾಯಪಟ್ಟರು.</p>.<p>ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರತಿಷ್ಠಾನ ಟ್ರಸ್ಟ್,ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್, ಇನ್ಫೊಸಿಸ್ ಹಾಗೂ ಎಲ್ಐಸಿ ಸಹಯೋಗದಲ್ಲಿ ಭಾನುವಾರ ಇಲ್ಲಿ ನಡೆದ ‘ಬಾಲೇಖಾನ್ ಅವರ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯುದ್ಧ, ದ್ವೇಷ, ಅಸೂಯೆಗಳೇ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಎಲ್ಲವನ್ನೂ, ಎಲ್ಲರನ್ನೂ ಒಳಗೊಳ್ಳುವ ಸಂಗೀತದ ಅವಶ್ಯಕತೆಯಿದೆ. ಧಾರವಾಡ ಘರಾಣೆ ಹುಟ್ಟಿಗೆ ಕಾರಣರಾದ ಖಾನ್ ಕುಟುಂಬದ ಸಂಗೀತ ಸೇವೆ ಸೌಹಾರ್ದ ಸಮಾಜಕ್ಕೆ ಮಾದರಿಯಾಗಿದೆ’ ಎಂದರು.</p>.<p class="Subhead">ಸಿತಾರ್ ನವಾಜ್ ಉಸ್ತಾದ್ ಬಾಲೆ ಖಾನ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿನಾಯಕ ತೊರವಿ, ‘ಧಾರವಾಡದ ಸಂಗೀತ ಪ್ರೀತಿಯನ್ನು ತೋರಿಸುವ ಉದ್ದೇಶದಿಂದಲೇ ಬೆಂಗಳೂರಿನಲ್ಲಿ ಧಾರವಾಡ ಹೆಸರಿನ ಸಂಗೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇನೆ’ ಎಂದರು.</p>.<p>ನಂತರ ಹಿರಿಯ ಸಂಗೀತ ಗಾಯಕರು ಹಾಗೂ ಕಲಾವಿದರಿಂದ ಬೆಳಿಗ್ಗೆಯಿಂದ ರಾತ್ರಿಯವರೆಗೂ ನಿರಂತರ ಸಂಗೀತ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಸೌಹಾರ್ದ ಕದಡಿರುವ ಈ ಹೊತ್ತಿನಲ್ಲಿ ಭಾವೈಕ್ಯ ಸಾರುವಲ್ಲಿ ಭಾರತೀಯ ಸಂಗೀತವು ಮುಖ್ಯ ಪಾತ್ರವನ್ನು ವಹಿಸುತ್ತಿದೆ’ ಎಂದು ಭಾಷಾತಜ್ಞ ಡಾ.ಗಣೇಶ ಎನ್.ದೇವಿ ಅವರು ಅಭಿಪ್ರಾಯಪಟ್ಟರು.</p>.<p>ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರತಿಷ್ಠಾನ ಟ್ರಸ್ಟ್,ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್, ಇನ್ಫೊಸಿಸ್ ಹಾಗೂ ಎಲ್ಐಸಿ ಸಹಯೋಗದಲ್ಲಿ ಭಾನುವಾರ ಇಲ್ಲಿ ನಡೆದ ‘ಬಾಲೇಖಾನ್ ಅವರ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯುದ್ಧ, ದ್ವೇಷ, ಅಸೂಯೆಗಳೇ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಎಲ್ಲವನ್ನೂ, ಎಲ್ಲರನ್ನೂ ಒಳಗೊಳ್ಳುವ ಸಂಗೀತದ ಅವಶ್ಯಕತೆಯಿದೆ. ಧಾರವಾಡ ಘರಾಣೆ ಹುಟ್ಟಿಗೆ ಕಾರಣರಾದ ಖಾನ್ ಕುಟುಂಬದ ಸಂಗೀತ ಸೇವೆ ಸೌಹಾರ್ದ ಸಮಾಜಕ್ಕೆ ಮಾದರಿಯಾಗಿದೆ’ ಎಂದರು.</p>.<p class="Subhead">ಸಿತಾರ್ ನವಾಜ್ ಉಸ್ತಾದ್ ಬಾಲೆ ಖಾನ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿನಾಯಕ ತೊರವಿ, ‘ಧಾರವಾಡದ ಸಂಗೀತ ಪ್ರೀತಿಯನ್ನು ತೋರಿಸುವ ಉದ್ದೇಶದಿಂದಲೇ ಬೆಂಗಳೂರಿನಲ್ಲಿ ಧಾರವಾಡ ಹೆಸರಿನ ಸಂಗೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇನೆ’ ಎಂದರು.</p>.<p>ನಂತರ ಹಿರಿಯ ಸಂಗೀತ ಗಾಯಕರು ಹಾಗೂ ಕಲಾವಿದರಿಂದ ಬೆಳಿಗ್ಗೆಯಿಂದ ರಾತ್ರಿಯವರೆಗೂ ನಿರಂತರ ಸಂಗೀತ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>