ಭಾನುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಅತಿ ಹೆಚ್ಚು ಟೀಕೆಗಳನ್ನು ಎದುರಿಸಿದರೂ ಮೋದಿ ಅವರು ಎಲ್ಲವನ್ನೂ ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಾರೆ. ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಆಡಳಿತದಲ್ಲಿ ವಿವಿಧ ರಾಜ್ಯಗಳ 92 ಚುನಾಯಿತ ಸರ್ಕಾರಗಳನ್ನು ಕಿತ್ತೆಸೆದು ಅನ್ಯಾಯ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಈಗ ಪ್ರಜಾಪ್ರಭುತ್ವದ ಕುರಿತು ಮಾತನಾಡುತ್ತಾರೆ’ ಎಂದರು.