ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ, ವಾಕ್ ಸ್ವಾತಂತ್ರ್ಯವನ್ನೇ ದಮನ ಮಾಡಿದ್ದ ನಾಯಕಿಯ ಹೆಸರಿನಲ್ಲಿ ಬಡವರಿಗಾಗಿ ಯೋಜನೆಗಳನ್ನು ಘೋಷಿಸುವುದು ಎಷ್ಟು ಸರಿ? ಒಂದು ಕುಟುಂಬದ ಸದಸ್ಯರ ಹೆಸರಿನಲ್ಲಿ 600ಕ್ಕೂ ಹೆಚ್ಚು ಯೋಜನೆಗಳು, ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಕ್ರೀಡಾಂಗಣಗಳು ಇವೆ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ ಮತ್ತು ಗುಲಾಮಿ ಮನಸ್ಥಿತಿಗೆ ಸಾಕ್ಷಿ’ ಎಂದು ಟೀಕಿಸಿದ್ದಾರೆ.