<p><strong>ಬೆಂಗಳೂರು</strong>: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ‘ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ‘ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ಎಂದುಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಒತ್ತಾಯ ಮಾಡಿದ್ದಾರೆ.</p>.<p>ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದು, ‘ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಘೋಷಣೆ ಮಾಡಬೇಕು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದಾರೆ.</p>.<p>‘ಕನ್ನಡಿಗರು ಊಟ ಮಾಡುವಾಗ ಏಕೆ ಇಂದಿರಾ ಗಾಂಧಿ ಅವರ ಹೆಸರಿನ ಮೂಲಕ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳಬೇಕು‘? ಎಂದು ಪ್ರಶ್ನಿಸಿದ್ದಾರೆ. ‘ಮುಖ್ಯಮಂತ್ರಿಯವರು ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಟ್ವಿಟರ್ನಲ್ಲಿ ಪರ ವಿರೋಧದ ಚರ್ಚೆ ನಡೆದಿದ್ದು, ಕೆಲವರು ಸಿಟಿ ರವಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನೂ ಕೆಲವರು, ‘ಹಾಗಾದರೇ ಕರ್ನಾಟಕದ ಯೋಜನೆಗಳಿಗೆ ಇಟ್ಟಿರುವ ವಾಜಪೇಯಿ, ಸಾವರ್ಕರ್ ಅವರ ಹೆಸರನ್ನೂ ಬದಲಾವಣೆ ಮಾಡಿ‘ ಎಂದು ಸವಾಲು ಎಸೆದಿದ್ದಾರೆ. ಈ ಮೂಲಕ ಸಿಟಿ ರವಿ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/district/bengaluru-city/press-meet-muniratna-minister-bangalore-855375.html" target="_blank">ಸಾಮಾಜಿಕ ಕಾರ್ಯಕರ್ತನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಆರೋಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ‘ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ‘ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ಎಂದುಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಒತ್ತಾಯ ಮಾಡಿದ್ದಾರೆ.</p>.<p>ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದು, ‘ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಘೋಷಣೆ ಮಾಡಬೇಕು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದಾರೆ.</p>.<p>‘ಕನ್ನಡಿಗರು ಊಟ ಮಾಡುವಾಗ ಏಕೆ ಇಂದಿರಾ ಗಾಂಧಿ ಅವರ ಹೆಸರಿನ ಮೂಲಕ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳಬೇಕು‘? ಎಂದು ಪ್ರಶ್ನಿಸಿದ್ದಾರೆ. ‘ಮುಖ್ಯಮಂತ್ರಿಯವರು ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಟ್ವಿಟರ್ನಲ್ಲಿ ಪರ ವಿರೋಧದ ಚರ್ಚೆ ನಡೆದಿದ್ದು, ಕೆಲವರು ಸಿಟಿ ರವಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನೂ ಕೆಲವರು, ‘ಹಾಗಾದರೇ ಕರ್ನಾಟಕದ ಯೋಜನೆಗಳಿಗೆ ಇಟ್ಟಿರುವ ವಾಜಪೇಯಿ, ಸಾವರ್ಕರ್ ಅವರ ಹೆಸರನ್ನೂ ಬದಲಾವಣೆ ಮಾಡಿ‘ ಎಂದು ಸವಾಲು ಎಸೆದಿದ್ದಾರೆ. ಈ ಮೂಲಕ ಸಿಟಿ ರವಿ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/district/bengaluru-city/press-meet-muniratna-minister-bangalore-855375.html" target="_blank">ಸಾಮಾಜಿಕ ಕಾರ್ಯಕರ್ತನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಆರೋಪ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>