ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರಾಜ್ಯದ್ರೋಹಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷವು, ‘ರಾಜ್ಯದ್ರೋಹಿ ಸಿ.ಟಿ.ರವಿ ಅವರೇ, ಕಳೆದ 2 ವರ್ಷಗಳಲ್ಲಿ ನಿಮ್ಮ ಸರ್ಕಾರ ಜಾರಿಗೊಳಿಸಿರುವ ಒಂದೇ ಒಂದು ಜನಪರ ಯೋಜನೆಯ ಹೆಸರು ಹೇಳಿ. ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಡಲಾಗದ, ಒಂದೂ ಜನಪರ ಯೋಜನೆ ಜಾರಿಗೊಳಿಸಲಾಗದ ಸಿಟಿ ರವಿಯ ಈ ಮಾತು ಕೈಲಾಗದವನು ಮೈ ಪರಚಿಕೊಂಡಂತೆ! ಅಂದಹಾಗೆ, ದೀನದಯಾಳ್ ಯಾವ ದೊಣ್ಣೆನಾಯಕನೆಂದು ಮೇಲ್ಸೇತುವೆಗೆ ಹೆಸರಿಟ್ಟಿದ್ದೀರಿ’ ಎಂದು ಪ್ರಶ್ನಿಸಿದೆ.
‘ಇಂದಿರಾ ಗಾಂಧಿಯವರ ಮೇಲಿನ ದ್ವೇಷಕ್ಕೆ ಅಪಘಾತ ಮಾಡಿ ಇಬ್ಬರು ಅಮಾಯಕರನ್ನು ಕೊಂದ ‘ಚೆಂಡು ಹೂ’ ರವಿಗೆ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕಂತೆ! ಅದೇ ದ್ವೇಷದಲ್ಲಿ ಇಂದಿರಾ ಗಾಂಧಿಯವರ ಮಹತ್ತರವಾದ ಉಳುವವನೇ ಹೊಲದೊಡೆಯ ಕಾರ್ಯಕ್ರಮವನ್ನು ರದ್ದುಗೊಳಿಸುವಿರಾ? ಬಾಂಗ್ಲಾದೇಶವನ್ನು ಪಾಕ್ನೊಂದಿಗೆ ಸೇರಿಸುವಿರಾ?’ ಎಂದು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದೆ.
‘ಇಂದಿರಾ ಗಾಂಧಿ ಕರುಣಿಸಿದ ಅನ್ನ ತಿಂದು ಬೆಳೆದು ಅವರ ವಿರುದ್ಧವೇ ದ್ವೇಷ ಕಾರುತ್ತಿರುವ ಸಿ.ಟಿ.ರವಿ ಮನೆಗೆ ಮಗನಲ್ಲ, ನಾಡಿಗೆ ಪ್ರಜೆಯಲ್ಲ! ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕಾರ್ಯಕ್ರಮದ ಫಲವಾಗಿ ಲಕ್ಷಾಂತರ ಕುಟುಂಬಗಳು ಬೆಳಕು ಕಂಡು ಹಸಿವು ನೀಗಿಸಿಕೊಂಡಿದ್ದನ್ನು ಮರೆತಿರುವ ರವಿ ಅವರು ತಾಯಿಗೂ, ತಾಯ್ನಾಡಿಗೂ ದ್ರೋಹ ಬಗೆಯುವ ಮನುಷ್ಯ’ ಎಂದು ಕಾಂಗ್ರೆಸ್ ಟೀಕಿಸಿದೆ.
‘ಈಗಿನ ಹಲವು ಬಿಜೆಪಿ ನಾಯಕರು ಇಂದಿರಾ ಗಾಂಧಿಯವರ ಗರೀಬಿ ಹಠಾವೋ ಕಾರ್ಯಕ್ರಮದ ಫಲಾನುಭವಿಗಳೇ. ಸಿ.ಟಿ.ರವಿ ಕೂಡ ಅದರಲ್ಲೊಬ್ಬರು. ಇಂದಿರಾ ಗಾಂಧಿಯವರ ಗರೀಬಿ ಹಠಾವೋ ಕಾರ್ಯಕ್ರಮ ಇಲ್ಲದೇ ಇದ್ದಿದ್ದರೆ ಸಿ.ಟಿ. ರವಿ ಇಂದು ಹರಿದ ಚಡ್ಡಿ ಹಾಕಿಕೊಂಡು ಯಾರದ್ದೋ ಮನೆಯ ಕೊಟ್ಟಿಗೆಯಲ್ಲಿ ಸೆಗಣಿ ಬಾಚುತ್ತಿದ್ದರು’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
‘ರಾಜ್ಯದಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಘೋಷಣೆ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿ ರವಿ ಟ್ವೀಟ್ ಮಾಡಿದ್ದರು.
ಈಗಿನ ಹಲವು ಬಿಜೆಪಿ ನಾಯಕರು ಇಂದಿರಾ ಗಾಂಧಿಯವರ ಗರೀಬಿ ಹಠಾವೋ ಕಾರ್ಯಕ್ರಮದ ಫಲಾನುಭವಿಗಳೇ, @CTRavi_BJP ಕೂಡ ಅದರಲ್ಲೊಬ್ಬರು.
— Karnataka Congress (@INCKarnataka) August 7, 2021
ಇಂದಿರಾ ಗಾಂಧಿಯವರ ಗರೀಭಿ ಹಠಾವೋ ಕಾರ್ಯಕ್ರಮ ಇಲ್ಲದೇ ಇದ್ದಿದ್ದರೆ ಸಿಟಿ ರವಿ ಇಂದು ಹರಿದ ಚಡ್ಡಿ ಹಾಕಿಕೊಂಡು ಯಾರದ್ದೋ ಮನೆಯ ಕೊಟ್ಟಿಗೆಯಲ್ಲಿ ಸೆಗಣಿ ಬಾಚುತ್ತಿದ್ದರು.
ಇಂದಿರಾ ಗಾಂಧಿ ಕರುಣಿಸಿದ ಅನ್ನ ತಿಂದು ಬೆಳೆದು ಅವರ ವಿರುದ್ಧವೇ ದ್ವೇಷ ಕಾರುತ್ತಿರುವ @CTRavi_BJP ಮನೆಗೆ ಮಗನಲ್ಲ, ನಾಡಿಗೆ ಪ್ರಜೆಯಲ್ಲ!
— Karnataka Congress (@INCKarnataka) August 7, 2021
ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕಾರ್ಯಕ್ರಮದ ಫಲವಾಗಿ ಲಕ್ಷಾಂತರ ಕುಟುಂಬಗಳು ಬೆಳಕು ಕಂಡು ಹಸಿವು ನೀಗಿಸಿಕೊಂಡಿದ್ದನ್ನು ಮರೆತಿರುವ ಸಿಟಿ ರವಿ ತಾಯಿಗೂ, ತಾಯ್ನಾಡಿಗೂ ದ್ರೋಹ ಬಗೆಯುವ ಮನುಷ್ಯ.
ಇಂದಿರಾ ಗಾಂಧಿಯವರ ಮೇಲಿನ ದ್ವೇಷಕ್ಕೆ ಆಕ್ಸಿಡೆಂಟ್ ಮಾಡಿ ಇಬ್ಬರು ಅಮಾಯಕರನ್ನ ಕೊಂದ 'ಚೆಂಡು ಹೂ' ರವಿಗೆ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕಂತೆ!
— Karnataka Congress (@INCKarnataka) August 7, 2021
ಅದೇ ದ್ವೇಷದಲ್ಲಿ ಇಂದಿರಾ ಗಾಂಧಿಯವರ ಮಹತ್ತರವಾದ ಉಳುವವನೇ ಹೊಲದೊಡೆಯ ಕಾರ್ಯಕ್ರಮವನ್ನ ರದ್ದುಗೊಳಿಸುವಿರಾ @CTRavi_BJP?
ಬಾಂಗ್ಲಾದೇಶವನ್ನು ಪಾಕ್ನೊಂದಿಗೆ ಸೇರಿಸುವಿರಾ!?
2/2
ರಾಜ್ಯದ್ರೋಹಿ @CTRavi_BJP, ಕಳೆದ 2 ವರ್ಷದಲ್ಲಿ ನಿಮ್ಮ ಸರ್ಕಾರದ ಒಂದೇ ಒಂದು ಜನಪರ ಯೋಜನೆಯ ಹೆಸರು ಹೇಳಿ.
— Karnataka Congress (@INCKarnataka) August 7, 2021
ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಡಲಾಗದ, ಒಂದೂ ಜನಪರ ಯೋಜನೆ ಜಾರಿಗೊಳಿಸಲಾಗದ ಸಿಟಿ ರವಿಯ ಈ ಮಾತು ಕೈಲಾಗದವನು ಮೈ ಪರಚಿಕೊಂಡಂತೆ!
ಅಂದಹಾಗೆ, ದೀನದಯಾಳ್ ಯಾವ ದೊಣ್ಣೆನಾಯಕನೆಂದು ಮೇಲ್ಸೇತುವೆಗೆ ಹೆಸರಿಟ್ಟಿದ್ದೀರಿ?
1/2 pic.twitter.com/dayuASBqGG
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.