ತುರ್ತು ಪರಿಸ್ಥಿತಿಯ ದಿನಗಳಲ್ಲಿ ವ್ಯಕ್ತಿ ಸ್ವಾತಂತ್ರ್ಯ ಸಂಪೂರ್ಣವಾಗಿ ಹರಣವಾಗಿತ್ತು. ಆದರೆ, ಅದರ ವಿರುದ್ಧ ಜಯಪ್ರಕಾಶ್ ನಾರಾಯಣ ಅವರ ನೇತೃತ್ವದಲ್ಲಿ ಸೃಷ್ಟಿಯಾದ ಬಂಡಾಯ ದೇಶದಲ್ಲಿ ಒಂದು ಕ್ರಾಂತಿಗೆ ಮುನ್ನುಡಿ ಬರೆಯಿತು. ಸಾವಿರಾರು ಯುವಕರು ರಾಜಕೀಯಕ್ಕೆ ಧುಮುಕಿ ಹೊಸ ತಲೆಮಾರಿನ ನಾಯಕತ್ವ ಸೃಷ್ಟಿಯಾಯಿತು ಎಂದರು.