ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಹಂಚಿಕೆ ಮಾಡುವ ಎರಡು ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನುಗಳ ನಿರ್ಬಂಧಿತ ಅವಧಿಯನ್ನು ಸಡಿಲಿಸಿ, 10 ವರ್ಷದಲ್ಲೇ ಶುದ್ಧ ಕ್ರಯಪತ್ರ ಮಾಡಿಕೊಡುವುದಕ್ಕೆ ಪೂರಕವಾಗಿ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.