<p><strong>ಹುಬ್ಬಳ್ಳಿ:</strong> ‘ವಿದ್ಯುತ್ ಖರೀದಿಯಿಂದ ಕೈಗಾರಿಕೆಗಳಿಗೆ ಆಗುತ್ತಿರುವ ಹೊರೆ ತಗ್ಗಿಸಲು ಖಾಸಗಿ ವಿದ್ಯುತ್ ಕಂಪನಿಗಳಿಂದ ಕೈಗಾರಿಕೆಗಳೇ ನೇರವಾಗಿ ವಿದ್ಯುತ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ಶನಿವಾರ ಇಲ್ಲಿ ನಡೆದ ‘ಟೈಕಾನ್ ಹುಬ್ಬಳ್ಳಿ-22’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಖಾಸಗಿ ವಿದ್ಯುತ್ ಉತ್ಪಾದನಾ ಕಂಪನಿಗಳಿಂದ ಪ್ರತಿ ಯೂನಿಟ್ಗೆ ₹2ರಿಂದ ₹3ಕ್ಕೆ ಖರೀದಿಸಿ ಅದನ್ನು ಕೈಗಾರಿಕೆಗಳಿಗೆ ₹10ರಿಂದ ₹12ರವರೆಗೆ ಮಾರಾಟ ಮಾಡಲಾಗುತ್ತಿದೆ. ಸಣ್ಣ ಕೈಗಾರಿಕೆಗಳಿಗೆ ಇದು ಹೊರೆಯಾಗಿದೆ. ಇದನ್ನು ತಪ್ಪಿಸಲು ಕೆಪಿಟಿಸಿಎಲ್ ಬದಲು ನೇರವಾಗಿ ವಿದ್ಯುತ್ ಖರೀದಿಗೆ ಕೈಗಾರಿಕೆಗಳಿಗೆ ನೆರವಾಗುತ್ತೇವೆ’ ಎಂದು ಹೇಳಿದರು.</p>.<p>‘ಈ ಉದ್ದೇಶಕ್ಕಾಗಿ ಕೈಗಾರಿಕಾ ಸಂಘಗಳನ್ನು ರಚಿಸಿಕೊಳ್ಳಬೇಕು. ಆ ಸಂಘದ ಮೂಲಕವೇ ವಿದ್ಯುತ್ ನೇರವಾಗಿ ಖರೀದಿಸಿದರೆ ಪ್ರತಿ ಯೂನಿಟ್ಗೆ ₹5ರ ವರೆಗೆ ಉಳಿತಾಯ ಆಗಲಿದೆ. ಇದಕ್ಕಾಗಿ ತಗುಲುವ ₹1 ಸೇವಾ ಶುಲ್ಕವನ್ನು ಸರ್ಕಾರವೇ ಭರಿಸಲಿದೆ. ಈಗಾಗಲೇ ಹಲವಾರು ಕೈಗಾರಿಕಾ ಸಂಘಗಳು ಹಾಗೂ ವಿದ್ಯುತ್ ಉತ್ಪಾದಕರು ಮುಂದೆ ಬಂದಿದ್ದು, ಇಬ್ಬರ ನಡುವೆ ಒಪ್ಪಂದ ಏರ್ಪಡಲಿದೆ’ ಎಂದು ಅವರು ತಿಳಿಸಿದರು.</p>.<p>‘ಪರಿಶಿಷ್ಟರಿಗೆ ಕೈಗಾರಿಕಾ ಭೂಮಿ ಖರೀದಿಗಾಗಿ ನೀಡುತ್ತಿರುವ ಶೇ75ರಷ್ಟು ರಿಯಾಯಿತಿಯನ್ನು ಇತರ ವರ್ಗದವರಿಗೂ ವಿಸ್ತರಿಸಲಾಗಿದೆ. ಉಳಿದ ಶೇ25ರಷ್ಟು ಹಣವನ್ನು ಹಲವು ಕಂತುಗಳಲ್ಲಿ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದವರು ಕೈಗಾರಿಕೆಗಳನ್ನು ಆರಂಭಿಸಬಹುದಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ವಿದ್ಯುತ್ ಖರೀದಿಯಿಂದ ಕೈಗಾರಿಕೆಗಳಿಗೆ ಆಗುತ್ತಿರುವ ಹೊರೆ ತಗ್ಗಿಸಲು ಖಾಸಗಿ ವಿದ್ಯುತ್ ಕಂಪನಿಗಳಿಂದ ಕೈಗಾರಿಕೆಗಳೇ ನೇರವಾಗಿ ವಿದ್ಯುತ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ಶನಿವಾರ ಇಲ್ಲಿ ನಡೆದ ‘ಟೈಕಾನ್ ಹುಬ್ಬಳ್ಳಿ-22’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಖಾಸಗಿ ವಿದ್ಯುತ್ ಉತ್ಪಾದನಾ ಕಂಪನಿಗಳಿಂದ ಪ್ರತಿ ಯೂನಿಟ್ಗೆ ₹2ರಿಂದ ₹3ಕ್ಕೆ ಖರೀದಿಸಿ ಅದನ್ನು ಕೈಗಾರಿಕೆಗಳಿಗೆ ₹10ರಿಂದ ₹12ರವರೆಗೆ ಮಾರಾಟ ಮಾಡಲಾಗುತ್ತಿದೆ. ಸಣ್ಣ ಕೈಗಾರಿಕೆಗಳಿಗೆ ಇದು ಹೊರೆಯಾಗಿದೆ. ಇದನ್ನು ತಪ್ಪಿಸಲು ಕೆಪಿಟಿಸಿಎಲ್ ಬದಲು ನೇರವಾಗಿ ವಿದ್ಯುತ್ ಖರೀದಿಗೆ ಕೈಗಾರಿಕೆಗಳಿಗೆ ನೆರವಾಗುತ್ತೇವೆ’ ಎಂದು ಹೇಳಿದರು.</p>.<p>‘ಈ ಉದ್ದೇಶಕ್ಕಾಗಿ ಕೈಗಾರಿಕಾ ಸಂಘಗಳನ್ನು ರಚಿಸಿಕೊಳ್ಳಬೇಕು. ಆ ಸಂಘದ ಮೂಲಕವೇ ವಿದ್ಯುತ್ ನೇರವಾಗಿ ಖರೀದಿಸಿದರೆ ಪ್ರತಿ ಯೂನಿಟ್ಗೆ ₹5ರ ವರೆಗೆ ಉಳಿತಾಯ ಆಗಲಿದೆ. ಇದಕ್ಕಾಗಿ ತಗುಲುವ ₹1 ಸೇವಾ ಶುಲ್ಕವನ್ನು ಸರ್ಕಾರವೇ ಭರಿಸಲಿದೆ. ಈಗಾಗಲೇ ಹಲವಾರು ಕೈಗಾರಿಕಾ ಸಂಘಗಳು ಹಾಗೂ ವಿದ್ಯುತ್ ಉತ್ಪಾದಕರು ಮುಂದೆ ಬಂದಿದ್ದು, ಇಬ್ಬರ ನಡುವೆ ಒಪ್ಪಂದ ಏರ್ಪಡಲಿದೆ’ ಎಂದು ಅವರು ತಿಳಿಸಿದರು.</p>.<p>‘ಪರಿಶಿಷ್ಟರಿಗೆ ಕೈಗಾರಿಕಾ ಭೂಮಿ ಖರೀದಿಗಾಗಿ ನೀಡುತ್ತಿರುವ ಶೇ75ರಷ್ಟು ರಿಯಾಯಿತಿಯನ್ನು ಇತರ ವರ್ಗದವರಿಗೂ ವಿಸ್ತರಿಸಲಾಗಿದೆ. ಉಳಿದ ಶೇ25ರಷ್ಟು ಹಣವನ್ನು ಹಲವು ಕಂತುಗಳಲ್ಲಿ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದವರು ಕೈಗಾರಿಕೆಗಳನ್ನು ಆರಂಭಿಸಬಹುದಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>