<p><strong>ಶ್ರೀರಾಂಪುರ: ಸಮೀಪದ ಕಡವಿಗೆರೆ ಅರಣ್ಯ ಪ್ರದೇಶದಲ್ಲಿ</strong>ಗಂಟಲಿಗೆ ಗಾಯ ಮಾಡಿಕೊಂಡು ಆಹಾರ ಸೇವಿಸದೆ ನಿತ್ರಾಣಗೊಂಡು ಚಿರತೆಯೊಂದು ಭಾನುವಾರ ಮೃತಪಟ್ಟಿದೆ.</p>.<p>ಈ ಕುರಿತು ಮಾಹಿತಿ ನೀಡಿದ ಅರಣ್ಯಾಧಿಕಾರಿ ಸುಜಾತಾ, ‘ಚಿರತೆ ಸುಮಾರು ಒಂದೂವರೆ ವರ್ಷದ್ದಾಗಿದೆ. ಕಾಡಿನಲ್ಲಿ ಒಣಗಿದ ಮರದ ಕಟ್ಟಿಗೆಯಿಂದ ಗಂಟಲಿಗೆ ಗಾಯಮಾಡಿಕೊಂಡಿರುವ ಸಾಧ್ಯತೆ ಇದೆ. ನೋವಿನಿಂದ ಆಹಾರ ಸೇವಿಸಲಾಗದೆ ನಿತ್ರಾಣಗೊಂಡು ಮೃತಪಟ್ಟಿದೆ. ಸಿಬ್ಬಂದಿ ಚಿರತೆ ಮಲಗಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಚಿರತೆ ಸೆರೆಗೆ ಬಲೆ ಬೀಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<p>ಚಿರತೆಯ ಶವವನ್ನು ಹೊಸದುರ್ಗಕ್ಕೆ ತೆಗೆದುಕೊಂಡು ಹೋಗಿ ಅಂತಿಮ ವಿಧಿ ನೆರವೇರಿಸಲಾಯಿತು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲಕಂಠಪ್ಪ, ಉಪ ವಲಯ ಅರಣ್ಯಾಧಿಕಾರಿ ಯೋಗೇಶ್, ವನಪಾಲಕ ಹರೀಶ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಾಂಪುರ: ಸಮೀಪದ ಕಡವಿಗೆರೆ ಅರಣ್ಯ ಪ್ರದೇಶದಲ್ಲಿ</strong>ಗಂಟಲಿಗೆ ಗಾಯ ಮಾಡಿಕೊಂಡು ಆಹಾರ ಸೇವಿಸದೆ ನಿತ್ರಾಣಗೊಂಡು ಚಿರತೆಯೊಂದು ಭಾನುವಾರ ಮೃತಪಟ್ಟಿದೆ.</p>.<p>ಈ ಕುರಿತು ಮಾಹಿತಿ ನೀಡಿದ ಅರಣ್ಯಾಧಿಕಾರಿ ಸುಜಾತಾ, ‘ಚಿರತೆ ಸುಮಾರು ಒಂದೂವರೆ ವರ್ಷದ್ದಾಗಿದೆ. ಕಾಡಿನಲ್ಲಿ ಒಣಗಿದ ಮರದ ಕಟ್ಟಿಗೆಯಿಂದ ಗಂಟಲಿಗೆ ಗಾಯಮಾಡಿಕೊಂಡಿರುವ ಸಾಧ್ಯತೆ ಇದೆ. ನೋವಿನಿಂದ ಆಹಾರ ಸೇವಿಸಲಾಗದೆ ನಿತ್ರಾಣಗೊಂಡು ಮೃತಪಟ್ಟಿದೆ. ಸಿಬ್ಬಂದಿ ಚಿರತೆ ಮಲಗಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಚಿರತೆ ಸೆರೆಗೆ ಬಲೆ ಬೀಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<p>ಚಿರತೆಯ ಶವವನ್ನು ಹೊಸದುರ್ಗಕ್ಕೆ ತೆಗೆದುಕೊಂಡು ಹೋಗಿ ಅಂತಿಮ ವಿಧಿ ನೆರವೇರಿಸಲಾಯಿತು.</p>.<p>ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲಕಂಠಪ್ಪ, ಉಪ ವಲಯ ಅರಣ್ಯಾಧಿಕಾರಿ ಯೋಗೇಶ್, ವನಪಾಲಕ ಹರೀಶ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>