ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷನಿಷ್ಠರಿಗೆ ಅನ್ಯಾಯವಾಗಿದೆ: ಶಾಸಕ ಅರವಿಂದ ಬೆಲ್ಲದ್

Last Updated 13 ಜನವರಿ 2021, 11:23 IST
ಅಕ್ಷರ ಗಾತ್ರ

ಬೆಂಗಳೂರು: ಸಂಪುಟ ವಿಸ್ತರಣೆಯಲ್ಲಿ ಪಕ್ಷನಿಷ್ಠ ಶಾಸಕರು ಮತ್ತು ಯುವಕರಿಗೆ ಅನ್ಯಾಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು.

ರಾಜಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಕೆಲಸ ಮಾಡುವ ಅರ್ಹತೆ ಇರುವವರು, ಪಕ್ಷನಿಷ್ಠರು ಮತ್ತು ಯುವಕರಿಗೆ ಅನ್ಯಾಯ ಮಾಡಲಾಗಿದೆ. ಪಕ್ಷದ ವರಿಷ್ಠರನ್ನು ಭೇಟಿಯಾಗಿ ಈ ವಿಷಯ ತಿಳಿಸುತ್ತೇನೆ' ಎಂದರು.

'ನಿಮ್ಮ ತಂದೆಗೆ ಅನ್ಯಾಯವಾಗಿದೆ. ನಿನ್ನನ್ನು ಸಚಿವನಾಗಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ವಿಧಾನ ಪರಿಷತ್ತಿನ ಐವರು ಸದಸ್ಯರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಅಗತ್ಯ ಏನಿತ್ತು' ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT