ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿ ಪಟ್ಟಿಯಿಂದ ಅಮಾಯಕರ ಹೆಸರು ಹೊರಕ್ಕೆ: ಆರಗ ಜ್ಞಾನೇಂದ್ರ

Last Updated 6 ಸೆಪ್ಟೆಂಬರ್ 2021, 22:32 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ, ರೈತ ಹಾಗೂ ಜನಪರ ಚಳವಳಿಗಳಲ್ಲಿ ಭಾಗವಹಿಸಿದವರು ಅಮಾಯಕರಾಗಿದ್ದು, ಅಂತಹವರೂ ಸೇರಿ ದಂತೆ ಅಮಾಯಕರ ಹೆಸರುಗಳು ರೌಡಿಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಅವುಗಳನ್ನು ಕೈಬಿಡಲು ಕ್ರಮವಹಿ ಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿರುವ ರೌಡಿ ಪಟ್ಟಿಯನ್ನು ಕಾನೂನಿನ ಮಾನದಂಡಗಳ ಪ್ರಕಾರ ಮರು ಪರಿಶೀಲಿಸಬೇಕು. ಈ ರೀತಿಯ ವೈಜ್ಞಾನಿಕವಾಗಿ ಪರಿಷ್ಕರಿಸುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಗಿದೆ’ ಎಂದು ಹೇಳಿದರು.

‘ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂ ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT